ವಿಚಿತ್ರವೆಂದರೆ, ಇದೇ ರಮೇಶ್ ಅವರೇ ಹಿಂದೆ, ರಸ್ತೆ ಮತ್ತಿತರ ಕಾಮಗಾರಿಗಳಲ್ಲಿ ನಡೆಯುತ್ತಿದ್ದ ಅವ್ಯವಹಾರಗಳಲ್ಲಿ ರಾಜಕಾರಣಿ- ಅಧಿಕಾರಿಗಳ ನಡುವಿನ ಅಪವಿತ್ರ ಸಂಬಂಧದ ಬಗ್ಗೆ ಮಾಧ್ಯಮಗಳ ಮುಂದೆ ಗಟ್ಟಿಯಾಗಿ ಧ್ವನಿಎತ್ತಿದ್ದರು ಮತ್ತು ಬಿಬಿಎಂಪಿಯ ಅನೇಕ ಹಗರಣಗಳನ್ನು ಬಯಲಿಗೆ ಎಳೆದಿದ್ದರು. ಆಗ ರಾಜ್ಯದಲ್ಲಿ ಮತ್ತು ಬಿಬಿಎಂಪಿಯಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿಕೂಟ ಅಧಿಕಾರದಲ್ಲಿತ್ತು. ಕಾಲಚಕ್ರ ಉರುಳಿ, ಈಗ ಈ ಎರಡರಲ್ಲೂ ಬಿಜೆಪಿ ಅಧಿಕಾರದಲ್ಲಿದೆ. ಆದರೆ, ಅಧಿಕಾರಸ್ಥರ ನಡೆ ಮತ್ತು ಕಾರ್ಯವಿಧಾನದಲ್ಲಿ ಬದಲಾವಣೆಯೇನೂ ಆಗಿಲ್ಲ.