ಭಾರತ ಕ್ರಿಕೆಟ್ ತಂಡದ ಮೇರು ಆಟಗಾರ ಮಹೇಂದ್ರಸಿಂಗ್ ಧೋನಿ ಅವರು ಭಾನುವಾರ ನಡೆದ ಭಾರತ–ಪಾಕ್ ನಡುವಣ ಪಂದ್ಯ ವೀಕ್ಷಣೆಗಾಗಿ ಪಾಕಿಸ್ತಾನ ಮೂಲದ ವ್ಯಕ್ತಿಯೊಬ್ಬರಿಗೆ ಟಿಕೆಟ್ ಕೊಡಿಸಿರುವುದು ಮತ್ತು ಭಾರತದ ವಿರಾಟ್ ಕೊಹ್ಲಿ, ಸಚಿನ್ ತೆಂಡೂಲ್ಕರ್ ಅವರನ್ನು ಪಾಕಿಸ್ತಾನದ ಆಟಗಾರ ಬಾಬರ್ ಆಜಂ ಅವರು ಮಾದರಿ ಆಗಿಸಿಕೊಂಡಿರುವುದು ವರದಿಯಾಗಿದೆ (ಪ್ರ.ವಾ., ಜೂನ್ 15). ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಬಂಧ ಹಳಸಿಹೋಗುತ್ತಿರುವ ಇಂದಿನ ಸಂದರ್ಭದಲ್ಲಿ, ಈ ಬೆಳವಣಿಗೆಗಳು ಆಶಾದಾಯಕವಾಗಿ ಕಾಣಿಸುತ್ತವೆ. ದ್ವೇಷ–ಮತ್ಸರ ಹೃದಯದಲ್ಲಿಲ್ಲ, ಕಲುಷಿತ ಮನಸ್ಸುಗಳಲ್ಲಿ ಮಾತ್ರ ಇರಲು ಸಾಧ್ಯ ಎಂಬುದಕ್ಕೆ ಇವು ನಿದರ್ಶನಗಳು.