ವಿಶ್ವ ಪರಿಸರ ದಿನವನ್ನು ಮೊನ್ನೆಯಷ್ಟೇ ಆಚರಿಸಿದ್ದೇವೆ. ಅಷ್ಟರಲ್ಲಾಗಲೇ, ಕೊಡಗು ಜಿಲ್ಲೆಯಲ್ಲಿ ರೆಸಾರ್ಟ್ ನಿರ್ಮಾಣಕ್ಕಾಗಿ 808 ಮರಗಳ ಮಾರಣಹೋಮಕ್ಕೆ ಅರಣ್ಯ ಇಲಾಖೆ ಅನುಮತಿ ನೀಡಿದ್ದ ವಿಷಯ ತಿಳಿದು (ಪ್ರ.ವಾ., ಜೂನ್ 7) ಆಘಾತವಾಗಿತ್ತು. ಆದರೆ ಕೂಡಲೇ ಎಚ್ಚೆತ್ತ ಸರ್ಕಾರ, ಮರ ಕಡಿಯುವುದನ್ನು ಸ್ಥಗಿತಗೊಳಿಸಿರುವುದು ಕೊಂಚ ಸಮಾಧಾನ ತಂದಿದೆ.