<p>ಕಾಂಗ್ರೆಸ್ ನಾಯಕಿ, ನಟಿ ರಮ್ಯಾ ಹಾಗೂ ‘ಜಸ್ಟ್ ಆಸ್ಕಿಂಗ್’ ಖ್ಯಾತಿಯ ನಟ ಪ್ರಕಾಶ್ ರೈ ಅವರು ಮೇ 12ರಂದು ನಡೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮತ ಚಲಾಯಿಸಿಲ್ಲ ಎಂಬ ಸುದ್ದಿ ಓದಿ ‘ದೀಪದ ಬುಡವೇ ಕತ್ತಲು’ ಎಂಬ ನಾಣ್ನುಡಿ ನೆನಪಿಗೆ ಬಂತು.</p>.<p>ಯಾವುದೇ ಗೊಂದಲಗಳಿಲ್ಲದಂತೆ ಚುನಾವಣೆಗಳು ನಡೆಯಬೇಕು ಎಂಬ ಕಾರಣಕ್ಕೆ ಚುನಾವಣಾ ಆಯೋಗ ಮೊದಲೇ ಸಾಕಷ್ಟು ತಯಾರಿ ನಡೆಸಿತ್ತು. ಮತದಾನದ ಪ್ರಮಾಣ ಹೆಚ್ಚಿಸುವ ಸಲುವಾಗಿ ಜಾಗೃತಿ ಅಭಿಯಾನಗಳನ್ನೂ ನಡೆಸಲಾಗಿತ್ತು. ಆದರೆ ಈ ‘ಸುಶಿಕ್ಷಿತ, ಘನತೆವೆತ್ತವರು’ ಮತದಾನ ಮಾಡದೆ ಬೇಜವಾಬ್ದಾರಿ ತೋರಿದ್ದಾರೆ.</p>.<p>ವಯಸ್ಸಾದವರು, ಅಂಗವಿಕಲರು, ದೂರದ ಊರುಗಳಿಂದ ಬಂದವರು, ಮತದಾನದ ದಿನವೇ ಮದುವೆಯಾದವರು... ಹೀಗೆ ಎಲ್ಲರೂ ಮತ ಚಲಾಯಿಸಿದ್ದನ್ನು ನೋಡಿದ್ದೇವೆ. ಹೀಗಿರುವಾಗ ಜವಾಬ್ದಾರಿಯುತ ಸ್ಥಾನದಲ್ಲಿರುವ ಈ ಇಬ್ಬರು ಹೀಗೆ ಬೇಜವಾಬ್ದಾರಿತನ ತೋರಬಹುದೇ? ಮತದಾನ ಮಾಡದೆಯೇ ಯಾವ ನೈತಿಕತೆಯಿಂದ ಇವರು ಮುಂದಿನ ಸರ್ಕಾರವನ್ನು ಪ್ರಶ್ನಿಸುತ್ತಾರೆ? ನಾಲ್ಕು ಜನರಿಗೆ ಮಾದರಿಯಾಗಬೇಕಾದವರೇ ಹೀಗೆ ಮಾಡುವುದು ಎಷ್ಟು ಸರಿ?</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಾಂಗ್ರೆಸ್ ನಾಯಕಿ, ನಟಿ ರಮ್ಯಾ ಹಾಗೂ ‘ಜಸ್ಟ್ ಆಸ್ಕಿಂಗ್’ ಖ್ಯಾತಿಯ ನಟ ಪ್ರಕಾಶ್ ರೈ ಅವರು ಮೇ 12ರಂದು ನಡೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮತ ಚಲಾಯಿಸಿಲ್ಲ ಎಂಬ ಸುದ್ದಿ ಓದಿ ‘ದೀಪದ ಬುಡವೇ ಕತ್ತಲು’ ಎಂಬ ನಾಣ್ನುಡಿ ನೆನಪಿಗೆ ಬಂತು.</p>.<p>ಯಾವುದೇ ಗೊಂದಲಗಳಿಲ್ಲದಂತೆ ಚುನಾವಣೆಗಳು ನಡೆಯಬೇಕು ಎಂಬ ಕಾರಣಕ್ಕೆ ಚುನಾವಣಾ ಆಯೋಗ ಮೊದಲೇ ಸಾಕಷ್ಟು ತಯಾರಿ ನಡೆಸಿತ್ತು. ಮತದಾನದ ಪ್ರಮಾಣ ಹೆಚ್ಚಿಸುವ ಸಲುವಾಗಿ ಜಾಗೃತಿ ಅಭಿಯಾನಗಳನ್ನೂ ನಡೆಸಲಾಗಿತ್ತು. ಆದರೆ ಈ ‘ಸುಶಿಕ್ಷಿತ, ಘನತೆವೆತ್ತವರು’ ಮತದಾನ ಮಾಡದೆ ಬೇಜವಾಬ್ದಾರಿ ತೋರಿದ್ದಾರೆ.</p>.<p>ವಯಸ್ಸಾದವರು, ಅಂಗವಿಕಲರು, ದೂರದ ಊರುಗಳಿಂದ ಬಂದವರು, ಮತದಾನದ ದಿನವೇ ಮದುವೆಯಾದವರು... ಹೀಗೆ ಎಲ್ಲರೂ ಮತ ಚಲಾಯಿಸಿದ್ದನ್ನು ನೋಡಿದ್ದೇವೆ. ಹೀಗಿರುವಾಗ ಜವಾಬ್ದಾರಿಯುತ ಸ್ಥಾನದಲ್ಲಿರುವ ಈ ಇಬ್ಬರು ಹೀಗೆ ಬೇಜವಾಬ್ದಾರಿತನ ತೋರಬಹುದೇ? ಮತದಾನ ಮಾಡದೆಯೇ ಯಾವ ನೈತಿಕತೆಯಿಂದ ಇವರು ಮುಂದಿನ ಸರ್ಕಾರವನ್ನು ಪ್ರಶ್ನಿಸುತ್ತಾರೆ? ನಾಲ್ಕು ಜನರಿಗೆ ಮಾದರಿಯಾಗಬೇಕಾದವರೇ ಹೀಗೆ ಮಾಡುವುದು ಎಷ್ಟು ಸರಿ?</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>