<p>ಬೆಂಗಳೂರಿನ ವಿಜಯ ಕಾಲೇಜಿನಲ್ಲಿ (ಜ. 12 ರಂದು) ನಡೆದ ಸಂವಾದ ಕಾರ್ಯಕ್ರಮದಲ್ಲಿ `ಜಾತೀಯತೆ~ ಕುರಿತ ಓದುಗರ ಪ್ರಶ್ನೆಗಳಿಗೆ ಲೇಖಕ ಡಾ. ಎಸ್.ಎಲ್ ಭೈರಪ್ಪ ಅವರು ತೀರಾ ಲಘುವಾದ ಧಾಟಿಯಲ್ಲಿ ಉತ್ತರಿಸುತ್ತಾ `ನಮ್ಮ ದೇಶವನ್ನು ನಿಜವಾಗಿ ಕಾಡುತ್ತಿರುವುದು ಭ್ರಷ್ಟಾಚಾರವೇ ಹೊರತು ಜಾತಿಯಲ್ಲ.<br /> <br /> `ಬ್ರಾಹ್ಮಣರನ್ನೂ; ಮೇಲ್ಜಾತಿಯವರನ್ನು ಟೀಕಿಸುವುದರಲ್ಲಿ ಅರ್ಥವಿಲ್ಲ. ವಿವಾಹ ನೋಂದಣಿ ಕಚೇರಿಗೆ ಹೋಗಿ ನೋಡಿ; ಅಪಾರ ಸಂಖ್ಯೆಯಲ್ಲಿ ಅಂತರ್ಜಾತೀಯ ವಿವಾಹಗಳಾಗುತ್ತಿವೆ. <br /> <br /> ಖಾಸಗಿ ಕಂಪೆನಿಗಳು ಈಗ ಅಭ್ಯರ್ಥಿಗಳ ಜಾತಿ ಯಾವುದೆಂದು ಕೇಳುವುದೇ ಇಲ್ಲ. ಪದವಿ ಪ್ರಮಾಣ ಪತ್ರಗಳನ್ನೂ ಲೆಕ್ಕಿಸುವುದಿಲ್ಲ. ಅವರು ಕೊಡುವ ಪರೀಕ್ಷೆಯಲ್ಲಿ ತೇರ್ಗಡೆಯಾದರೆ ಸಾಕು; ಯಾರಿಗೆ ಬೇಕಾದರೂ ಕೆಲಸ ಕೊಡುತ್ತವೆ. ಈಗ ಜಾತಿ ಕುರಿತು ಮಾತನಾಡುತ್ತಿರುವವರು ಇಬ್ಬರು ಮಾತ್ರ. ಒಬ್ಬ ರಾಜಕಾರಣಿ, ಮತ್ತೊಬ್ಬ ಸಾಹಿತಿ ಎಂಬ ಮಾತುಗಳನ್ನು ಆಡಿದ್ದಾರೆ.<br /> <br /> ಎಲ್ಲ ಜಾತಿಗಳೂ ಈಗ ಮಠ ಕಟ್ಟಿಕೊಳ್ಳುತ್ತಿವೆ. ಮೀಸಲಾತಿ ಸಿಗುತ್ತದೆ ಎಂದರೆ ಎಲ್ಲರೂ ದಲಿತರಾಗಲು ಸಿದ್ಧರಾಗಿ ನಿಂತಿದ್ದಾರೆ. ಜಾತಿ ಹೆಸರಿನಲ್ಲಿ ಎಲ್ಲ ಅವಕಾಶಗಳನ್ನು ಕಬಳಿಸುವ ಪ್ರವೃತ್ತಿ ಎಲ್ಲರಲ್ಲೂ ವ್ಯಾಪಕವಾಗಿ ಕಂಡು ಬರುತ್ತಿದೆ. <br /> <br /> ನವ ಬ್ರಾಹ್ಮಣ್ಯವನ್ನು ಆವಾಹಿಸಿಕೊಂಡು ಈ ಶ್ರೇಣೀಕೃತ ವ್ಯವಸ್ಥೆಯಲ್ಲಿ ಶ್ರೇಷ್ಠರೆಂದು ಬಿಂಬಿಸಿಕೊಳ್ಳುವ ವ್ಯಸನದಲ್ಲಿ ನರಳುತ್ತಿರುವ ನಮ್ಮ ಸಾಮಾಜಿಕ ವ್ಯವಸ್ಥೆಯನ್ನು ಭೈರಪ್ಪನವರು ಸರಿಯಾಗಿ ಅರ್ಥ ಮಾಡಿಕೊಂಡಿಲ್ಲ. ಅವರು ಅರ್ಧ ಸತ್ಯದ ಮಾತುಗಳನ್ನು ಆಡುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರಿನ ವಿಜಯ ಕಾಲೇಜಿನಲ್ಲಿ (ಜ. 12 ರಂದು) ನಡೆದ ಸಂವಾದ ಕಾರ್ಯಕ್ರಮದಲ್ಲಿ `ಜಾತೀಯತೆ~ ಕುರಿತ ಓದುಗರ ಪ್ರಶ್ನೆಗಳಿಗೆ ಲೇಖಕ ಡಾ. ಎಸ್.ಎಲ್ ಭೈರಪ್ಪ ಅವರು ತೀರಾ ಲಘುವಾದ ಧಾಟಿಯಲ್ಲಿ ಉತ್ತರಿಸುತ್ತಾ `ನಮ್ಮ ದೇಶವನ್ನು ನಿಜವಾಗಿ ಕಾಡುತ್ತಿರುವುದು ಭ್ರಷ್ಟಾಚಾರವೇ ಹೊರತು ಜಾತಿಯಲ್ಲ.<br /> <br /> `ಬ್ರಾಹ್ಮಣರನ್ನೂ; ಮೇಲ್ಜಾತಿಯವರನ್ನು ಟೀಕಿಸುವುದರಲ್ಲಿ ಅರ್ಥವಿಲ್ಲ. ವಿವಾಹ ನೋಂದಣಿ ಕಚೇರಿಗೆ ಹೋಗಿ ನೋಡಿ; ಅಪಾರ ಸಂಖ್ಯೆಯಲ್ಲಿ ಅಂತರ್ಜಾತೀಯ ವಿವಾಹಗಳಾಗುತ್ತಿವೆ. <br /> <br /> ಖಾಸಗಿ ಕಂಪೆನಿಗಳು ಈಗ ಅಭ್ಯರ್ಥಿಗಳ ಜಾತಿ ಯಾವುದೆಂದು ಕೇಳುವುದೇ ಇಲ್ಲ. ಪದವಿ ಪ್ರಮಾಣ ಪತ್ರಗಳನ್ನೂ ಲೆಕ್ಕಿಸುವುದಿಲ್ಲ. ಅವರು ಕೊಡುವ ಪರೀಕ್ಷೆಯಲ್ಲಿ ತೇರ್ಗಡೆಯಾದರೆ ಸಾಕು; ಯಾರಿಗೆ ಬೇಕಾದರೂ ಕೆಲಸ ಕೊಡುತ್ತವೆ. ಈಗ ಜಾತಿ ಕುರಿತು ಮಾತನಾಡುತ್ತಿರುವವರು ಇಬ್ಬರು ಮಾತ್ರ. ಒಬ್ಬ ರಾಜಕಾರಣಿ, ಮತ್ತೊಬ್ಬ ಸಾಹಿತಿ ಎಂಬ ಮಾತುಗಳನ್ನು ಆಡಿದ್ದಾರೆ.<br /> <br /> ಎಲ್ಲ ಜಾತಿಗಳೂ ಈಗ ಮಠ ಕಟ್ಟಿಕೊಳ್ಳುತ್ತಿವೆ. ಮೀಸಲಾತಿ ಸಿಗುತ್ತದೆ ಎಂದರೆ ಎಲ್ಲರೂ ದಲಿತರಾಗಲು ಸಿದ್ಧರಾಗಿ ನಿಂತಿದ್ದಾರೆ. ಜಾತಿ ಹೆಸರಿನಲ್ಲಿ ಎಲ್ಲ ಅವಕಾಶಗಳನ್ನು ಕಬಳಿಸುವ ಪ್ರವೃತ್ತಿ ಎಲ್ಲರಲ್ಲೂ ವ್ಯಾಪಕವಾಗಿ ಕಂಡು ಬರುತ್ತಿದೆ. <br /> <br /> ನವ ಬ್ರಾಹ್ಮಣ್ಯವನ್ನು ಆವಾಹಿಸಿಕೊಂಡು ಈ ಶ್ರೇಣೀಕೃತ ವ್ಯವಸ್ಥೆಯಲ್ಲಿ ಶ್ರೇಷ್ಠರೆಂದು ಬಿಂಬಿಸಿಕೊಳ್ಳುವ ವ್ಯಸನದಲ್ಲಿ ನರಳುತ್ತಿರುವ ನಮ್ಮ ಸಾಮಾಜಿಕ ವ್ಯವಸ್ಥೆಯನ್ನು ಭೈರಪ್ಪನವರು ಸರಿಯಾಗಿ ಅರ್ಥ ಮಾಡಿಕೊಂಡಿಲ್ಲ. ಅವರು ಅರ್ಧ ಸತ್ಯದ ಮಾತುಗಳನ್ನು ಆಡುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>