ಕೆಳವರ್ಗದ ಜನರ ಜೀವನಮಟ್ಟ ಸ್ವಲ್ಪ ಸುಧಾರಿಸಿದೆ ಎಂದರೆ ಅದಕ್ಕೆ ಅಂಬೇಡ್ಕರ್, ಮಹಾತ್ಮ ಗಾಂಧಿ ಅವರಂತಹ ನಾಯಕರ ಹೋರಾಟವೇ ಕಾರಣ. ಅವರ ಚಿಂತನೆಗಳು ಹಾಗೂ ಆದರ್ಶಗಳ ಸ್ಮರಣೆ ನಿರಂತರವಾಗಿರಬೇಕು. ಆದರೆ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ದಲಿತ ವಿದ್ಯಾರ್ಥಿಯೊಬ್ಬರು ಇತ್ತೀಚೆಗೆ ಆತ್ಮಹತ್ಯೆಗೆ ಶರಣಾಗಿರುವುದು ಅತ್ಯಂತ ನೋವಿನ ಸಂಗತಿ.
ದಲಿತ ವರ್ಗದ ಬಗೆಗಿನ ತಾರತಮ್ಯದಿಂದ ನೊಂದು ಅವರು ಇಂತಹ ಕೃತ್ಯಕ್ಕೆ ಮುಂದಾದರು ಎಂದು ಹೇಳಲಾಗಿದೆ. ಇದು, ಅಸ್ಪೃಶ್ಯತೆ ಇನ್ನೂ ಜೀವಂತವಾಗಿರುವುದಕ್ಕೆ ಸಾಕ್ಷಿ. ಈ ಯುವಕನ ಆತ್ಮಹತ್ಯೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಇಂಥ ದುರಂತಗಳು ಮರುಕಳಿಸದಂತೆ ನೋಡಿಕೊಳ್ಳಬೇಕು.
-ಯಶ್ವಂತ್ ಆರ್., ಬೆಂಗಳೂರು