<p>ರಾಜ್ಯದ ಒಟ್ಟಾರೆ ಜನಸಂಖ್ಯೆಯಲ್ಲಿ ಹೆಚ್ಚಿನವರು ಒಬಿಸಿ ಪ್ರವರ್ಗದ ವ್ಯಾಪ್ತಿಗೆ ಬರುತ್ತಾರೆ. ಆದರೆ ರಾಜ್ಯ ಸರ್ಕಾರ ಮತ್ತು ಈಗಿನ ಹಿಂದುಳಿದ ವರ್ಗಗಳ ಆಯೋಗ ಈ ವರ್ಗಗಳ ಜನರನ್ನು ಅಲಕ್ಷಿಸಿವೆ. ಇದರಿಂದ ಒಬಿಸಿ (ಪ್ರವರ್ಗ 2 ಎ, 2 ಬಿ, 3 ಎ, 3 ಬಿ) ಅಭ್ಯರ್ಥಿಗಳಿಗೆ ಅನ್ಯಾಯವಾಗುತ್ತಿದೆ.<br /> <br /> ಕೇಂದ್ರ ಸರ್ಕಾರ 2009ರಲ್ಲಿ ಒಬಿಸಿ ವರ್ಗಗಳ ಜನರ ಆದಾಯ ಮಿತಿಯನ್ನು 4.5 ಲಕ್ಷ ರೂಗಳಿಗೆ ಏರಿಸಿದೆ. ಕೇರಳ,ಆಂಧ್ರಪ್ರದೇಶ ಸೇರಿದಂತೆ ಬಹುತೇಕ ರಾಜ್ಯಗಳು ಈ ವರ್ಗಗಳ ಆದಾಯದ ಮಿತಿಯನ್ನು ಹೆಚ್ಚಿಸಿವೆ. ಆದರೆ ಕರ್ನಾಟಕದಲ್ಲಿ ಇನ್ನೂ ಹೆಚ್ಚಳ ಆಗಿಲ್ಲ. ಇದರಿಂದಾಗಿ ಉದ್ಯೋಗ ಮತ್ತು ಶೈಕ್ಷಣಿಕ ಮೀಸಲಾತಿಯಲ್ಲಿ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ.<br /> <br /> 1995ರಲ್ಲಿ ಆದಾಯದ ಮಿತಿಯನ್ನು 2 ಲಕ್ಷ ರೂಗಳಿಗೆ ನಿಗದಿ ಮಾಡಲಾಗಿತ್ತು. 1995ರಲ್ಲಿ `ಬಿ~ ದರ್ಜೆಯ ಅಧಿಕಾರಿಗಳ ವಾರ್ಷಿಕ ವೇತನ 66 ಸಾವಿರ ರೂ ದಾಟುತ್ತಿರಲಿಲ್ಲ. ಆದರೆ ಈಗ `ಸಿ~ ದರ್ಜೆ ನೌಕರರ ವಾರ್ಷಿಕ ವೇತನ 2 ಲಕ್ಷ ರೂ. ದಾಟುತ್ತಿದೆ. ಇದರಿಂದಾಗಿ ಈ ವರ್ಗಗಳ ಮಕ್ಕಳಿಗೆ ಸರ್ಕಾರಿ ಉದ್ಯೋಗ ಹಾಗೂ ಶಿಕ್ಷಣದ ಮಿಸಲಾತಿ ಸಿಗುತ್ತಿಲ್ಲ. ಈ ಸೌಲಭ್ಯಗಳು ಸಿಗಬೇಕಾದರೆ ಅವರ ಆದಾಯದ ಮಿತಿ ಹೆಚ್ಚಿಸುವ ಅಗತ್ಯವಿದೆ. <br /> <br /> ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಆದಾಯ ಮಿತಿ ಹೆಚ್ಚಿಸುವಂತೆ ಶಿಫಾರಸು ಮಾಡಿದ್ದರೂ ಸರ್ಕಾರ ಗಮನ ಹರಿಸುತ್ತಿಲ್ಲ. ರಾಜ್ಯ ಸರ್ಕಾರ ಕೂಡಲೇ ಕೇಂದ್ರದ ಮಾದರಿಯಲ್ಲಿ ವೇತನ ಮಿತಿಯನ್ನು 4.5 ಲಕ್ಷ ರೂಗಳಿಗೆ ಏರಿಕೆ ಮಾಡಬೇಕೆಂದು ಮನವಿ ಮಾಡಿಕೊಳ್ಳುತ್ತೇನೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಜ್ಯದ ಒಟ್ಟಾರೆ ಜನಸಂಖ್ಯೆಯಲ್ಲಿ ಹೆಚ್ಚಿನವರು ಒಬಿಸಿ ಪ್ರವರ್ಗದ ವ್ಯಾಪ್ತಿಗೆ ಬರುತ್ತಾರೆ. ಆದರೆ ರಾಜ್ಯ ಸರ್ಕಾರ ಮತ್ತು ಈಗಿನ ಹಿಂದುಳಿದ ವರ್ಗಗಳ ಆಯೋಗ ಈ ವರ್ಗಗಳ ಜನರನ್ನು ಅಲಕ್ಷಿಸಿವೆ. ಇದರಿಂದ ಒಬಿಸಿ (ಪ್ರವರ್ಗ 2 ಎ, 2 ಬಿ, 3 ಎ, 3 ಬಿ) ಅಭ್ಯರ್ಥಿಗಳಿಗೆ ಅನ್ಯಾಯವಾಗುತ್ತಿದೆ.<br /> <br /> ಕೇಂದ್ರ ಸರ್ಕಾರ 2009ರಲ್ಲಿ ಒಬಿಸಿ ವರ್ಗಗಳ ಜನರ ಆದಾಯ ಮಿತಿಯನ್ನು 4.5 ಲಕ್ಷ ರೂಗಳಿಗೆ ಏರಿಸಿದೆ. ಕೇರಳ,ಆಂಧ್ರಪ್ರದೇಶ ಸೇರಿದಂತೆ ಬಹುತೇಕ ರಾಜ್ಯಗಳು ಈ ವರ್ಗಗಳ ಆದಾಯದ ಮಿತಿಯನ್ನು ಹೆಚ್ಚಿಸಿವೆ. ಆದರೆ ಕರ್ನಾಟಕದಲ್ಲಿ ಇನ್ನೂ ಹೆಚ್ಚಳ ಆಗಿಲ್ಲ. ಇದರಿಂದಾಗಿ ಉದ್ಯೋಗ ಮತ್ತು ಶೈಕ್ಷಣಿಕ ಮೀಸಲಾತಿಯಲ್ಲಿ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ.<br /> <br /> 1995ರಲ್ಲಿ ಆದಾಯದ ಮಿತಿಯನ್ನು 2 ಲಕ್ಷ ರೂಗಳಿಗೆ ನಿಗದಿ ಮಾಡಲಾಗಿತ್ತು. 1995ರಲ್ಲಿ `ಬಿ~ ದರ್ಜೆಯ ಅಧಿಕಾರಿಗಳ ವಾರ್ಷಿಕ ವೇತನ 66 ಸಾವಿರ ರೂ ದಾಟುತ್ತಿರಲಿಲ್ಲ. ಆದರೆ ಈಗ `ಸಿ~ ದರ್ಜೆ ನೌಕರರ ವಾರ್ಷಿಕ ವೇತನ 2 ಲಕ್ಷ ರೂ. ದಾಟುತ್ತಿದೆ. ಇದರಿಂದಾಗಿ ಈ ವರ್ಗಗಳ ಮಕ್ಕಳಿಗೆ ಸರ್ಕಾರಿ ಉದ್ಯೋಗ ಹಾಗೂ ಶಿಕ್ಷಣದ ಮಿಸಲಾತಿ ಸಿಗುತ್ತಿಲ್ಲ. ಈ ಸೌಲಭ್ಯಗಳು ಸಿಗಬೇಕಾದರೆ ಅವರ ಆದಾಯದ ಮಿತಿ ಹೆಚ್ಚಿಸುವ ಅಗತ್ಯವಿದೆ. <br /> <br /> ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಆದಾಯ ಮಿತಿ ಹೆಚ್ಚಿಸುವಂತೆ ಶಿಫಾರಸು ಮಾಡಿದ್ದರೂ ಸರ್ಕಾರ ಗಮನ ಹರಿಸುತ್ತಿಲ್ಲ. ರಾಜ್ಯ ಸರ್ಕಾರ ಕೂಡಲೇ ಕೇಂದ್ರದ ಮಾದರಿಯಲ್ಲಿ ವೇತನ ಮಿತಿಯನ್ನು 4.5 ಲಕ್ಷ ರೂಗಳಿಗೆ ಏರಿಕೆ ಮಾಡಬೇಕೆಂದು ಮನವಿ ಮಾಡಿಕೊಳ್ಳುತ್ತೇನೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>