<p>ಕನ್ನಡದ ಹೆಸರಿನಲ್ಲಿ ಹುಟ್ಟಿಕೊಂಡಿರುವ ಕೆಲವು ಸಂಘಟನೆಗಳು ಕನ್ನಡದ ಹೆಸರಿಗೆ ಮಸಿ ಬಳಿಯುವ ಕೆಲಸದಲ್ಲಿ ನಿರತವಾಗಿವೆ. ಸಾರ್ವಜನಿಕ ಆಸ್ತಿ ಪಾಸ್ತಿಗಳ ಮೇಲೆ ದಾಳಿ ಮಾಡುತ್ತ ಕಾನೂನನ್ನು ತಾವೇ ಕೈಗೆತ್ತಿಕೊಂಡಿರುವುದು ಆತಂಕಕಾರಿಯಾದ ಸಂಗತಿಯಾಗಿದೆ. <br /> <br /> ಇತ್ತೀಚೆಗೆ ನಿತ್ಯಾನಂದ ಆಶ್ರಮದ ವಿಷಯದಲ್ಲಿ ಈ ಸಂಘಟನೆಗಳು ವರ್ತಿಸಿದ ರೀತಿ ಹಲವು ಸಂಶಯಕ್ಕೆ ಎಡೆಮಾಡಿಕೊಡುತ್ತದೆ. ಸುದ್ದಿಯನ್ನು ಬಿತ್ತರಿಸಬೇಕಾದ, ಸಾಮಾಜಿಕ ಸ್ವಾಸ್ಥ್ಯವನ್ನು ಕಾಪಾಡಬೇಕಾದ ವಿದ್ಯುನ್ಮಾನ ಮಾದ್ಯಮಗಳು ಸ್ವತಃ ತಾವೇ ನ್ಯಾಯಾಧೀಶ ಸ್ಥಾನದಲ್ಲಿ ಕುಳಿತವರಂತೆ ಹಲವು ತೀರ್ಮಾನಗಳನ್ನು ಚರ್ಚೆಯ ಸಂದರ್ಭದಲ್ಲಿ ಬಿತ್ತರಿಸುತ್ತಿರುವುದು ವಿಷಾದನೀಯ. <br /> <br /> ಸಮಾಜದಲ್ಲಿ ಯಾವುದೇ ಸಮಸ್ಯೆಗಳು ತಲೆದೋರಿದರೆ ಅದನ್ನು ಸಾರ್ವಜನಿಕರಿಗೆ ಮತ್ತು ಸಂಬಂಧಿಸಿದ ಇಲಾಖೆಗೆ ತಿಳಿಸಲು ಸರ್ಕಾರವು ಸೂಕ್ತ ಕ್ರಮವನ್ನು ಕೈಗೊಳ್ಳಲಿ.<br /> ಆದರೆ ಈ ವಿದ್ಯುನ್ಮಾನ ಮಾಧ್ಯಮಗಳು ಸ್ವತಃ ತಾವೇ ತೀರ್ಮಾನಿಸುತ್ತ ಸಾಮಾಜಿಕ ಕಲಹಕ್ಕೆ/ ಸ್ವಾಸ್ಥ್ಯಕ್ಕೆ ಕಾರಣವಾಗುತ್ತಿರುವುದು ಆತಂಕಕಾರಿಯಾದ ಸಂಗತಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕನ್ನಡದ ಹೆಸರಿನಲ್ಲಿ ಹುಟ್ಟಿಕೊಂಡಿರುವ ಕೆಲವು ಸಂಘಟನೆಗಳು ಕನ್ನಡದ ಹೆಸರಿಗೆ ಮಸಿ ಬಳಿಯುವ ಕೆಲಸದಲ್ಲಿ ನಿರತವಾಗಿವೆ. ಸಾರ್ವಜನಿಕ ಆಸ್ತಿ ಪಾಸ್ತಿಗಳ ಮೇಲೆ ದಾಳಿ ಮಾಡುತ್ತ ಕಾನೂನನ್ನು ತಾವೇ ಕೈಗೆತ್ತಿಕೊಂಡಿರುವುದು ಆತಂಕಕಾರಿಯಾದ ಸಂಗತಿಯಾಗಿದೆ. <br /> <br /> ಇತ್ತೀಚೆಗೆ ನಿತ್ಯಾನಂದ ಆಶ್ರಮದ ವಿಷಯದಲ್ಲಿ ಈ ಸಂಘಟನೆಗಳು ವರ್ತಿಸಿದ ರೀತಿ ಹಲವು ಸಂಶಯಕ್ಕೆ ಎಡೆಮಾಡಿಕೊಡುತ್ತದೆ. ಸುದ್ದಿಯನ್ನು ಬಿತ್ತರಿಸಬೇಕಾದ, ಸಾಮಾಜಿಕ ಸ್ವಾಸ್ಥ್ಯವನ್ನು ಕಾಪಾಡಬೇಕಾದ ವಿದ್ಯುನ್ಮಾನ ಮಾದ್ಯಮಗಳು ಸ್ವತಃ ತಾವೇ ನ್ಯಾಯಾಧೀಶ ಸ್ಥಾನದಲ್ಲಿ ಕುಳಿತವರಂತೆ ಹಲವು ತೀರ್ಮಾನಗಳನ್ನು ಚರ್ಚೆಯ ಸಂದರ್ಭದಲ್ಲಿ ಬಿತ್ತರಿಸುತ್ತಿರುವುದು ವಿಷಾದನೀಯ. <br /> <br /> ಸಮಾಜದಲ್ಲಿ ಯಾವುದೇ ಸಮಸ್ಯೆಗಳು ತಲೆದೋರಿದರೆ ಅದನ್ನು ಸಾರ್ವಜನಿಕರಿಗೆ ಮತ್ತು ಸಂಬಂಧಿಸಿದ ಇಲಾಖೆಗೆ ತಿಳಿಸಲು ಸರ್ಕಾರವು ಸೂಕ್ತ ಕ್ರಮವನ್ನು ಕೈಗೊಳ್ಳಲಿ.<br /> ಆದರೆ ಈ ವಿದ್ಯುನ್ಮಾನ ಮಾಧ್ಯಮಗಳು ಸ್ವತಃ ತಾವೇ ತೀರ್ಮಾನಿಸುತ್ತ ಸಾಮಾಜಿಕ ಕಲಹಕ್ಕೆ/ ಸ್ವಾಸ್ಥ್ಯಕ್ಕೆ ಕಾರಣವಾಗುತ್ತಿರುವುದು ಆತಂಕಕಾರಿಯಾದ ಸಂಗತಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>