ಬಿಜೆಪಿಯ ಪ್ರಧಾನಿ ಸ್ಥಾನದ ಅಭ್ಯರ್ಥಿ ನರೇಂದ್ರ ಮೋದಿ ಅವರು ಗಾಂಧಿನಗರದ ಮತ-ಗಟ್ಟೆಯಲ್ಲಿ ಮತ ಚಲಾಯಿಸಿದ ಬಳಿಕ ಪಕ್ಷದ ಚಿಹ್ನೆ ಪ್ರದರ್ಶಿಸಿ ಮತಗಟ್ಟೆಯ ಹೊರಗೆ ಸುದ್ದಿಗಾರರ ಜತೆ ಮಾತನಾಡಿದ್ದು ಸರಿಯಲ್ಲ. ಇದು ಅವರಿಗೆ ಚುನಾವಣಾ ಆಯೋಗದ ಮೇಲೆ ಗೌರವ ಇಲ್ಲದಿರುವುದರ ಸೂಚನೆ.
ಬಿಜೆಪಿಯ ಹಿರಿಯ ನಾಯಕರೊಬ್ಬರು ಈ ರೀತಿ ಈ ಹಿಂದೆ ಎಂದೂ ವರ್ತಿಸಿರಲಿಲ್ಲ. ಅಡ್ವಾಣಿ, ವಾಜಪೇಯಿ, ಜಸ್ವಂತ್ ಸಿಂಗ್, ಸುಷ್ಮಾ ಸ್ವರಾಜ್ ತಮ್ಮ ಗೌರವ ,ಸ್ಥಾನಮಾನ ಅರಿತು, ಅದರಂತೆ ವರ್ತಿಸಿ ಜನರ ಮೆಚ್ಚುಗೆ ಗಳಿಸಿದ್ದಾರೆ. ಆದರೆ ನರೇಂದ್ರ ಮೋದಿ ತಮ್ಮ ವರ್ಚಸ್ಸಿಗೆ ಧಕ್ಕೆ ಉಂಟಾಗುವಂತೆ ವರ್ತಿಸಿದ್ದಾರೆ.