ರೈತರಿಗೆ ನೆರವು, ಮಾರ್ಗದರ್ಶನ ನೀಡುವುದೇ ಕೃಷಿ ವಿದ್ಯಾಲಯಗಳ ಸ್ಥಾಪನೆಯ ಹಿಂದಿನ ಉದ್ದೇಶ. ಆದರೆ ಅಲ್ಲಿನ ಸಿಬ್ಬಂದಿ, ಅಲ್ಲಿಂದ ಹೊರಬಂದ ಪದವೀಧರರು ಬ್ಯಾಂಕ್, ಕೃಷಿ ಇಲಾಖೆ ಅಥವಾ ಇತರೆಡೆ ಉದ್ಯೋಗಕ್ಕೆ ಸೇರಿ ಆರ್ಥಿಕವಾಗಿ ಅಭಿವೃದ್ಧಿಯಾಗಿದ್ದಾರೆ. ಕೃಷಿಕರ ಅಭಿವೃದ್ಧಿ ಮಾತ್ರ ಆಗಲಿಲ್ಲ. ಕೃಷಿ ವಿದ್ಯಾಲಯಗಳಿಗೆ ರಾಜ್ಯ ಸರ್ಕಾರವು ಅನುದಾನ ನೀಡುತ್ತದೆ. ಆದ್ದರಿಂದ ತನ್ನ
ಪ್ರಾಶಸ್ತ್ಯಗಳನ್ನು ಮಾರ್ಪಡಿಸಿಕೊಳ್ಳುವಂತೆ ಅವುಗಳ ಮೇಲೆ ಸರ್ಕಾರ ಒತ್ತಡ ಹೇರಬೇಕು. ವಾರ್ಷಿಕ ಕೃಷಿ ಮೇಳಗಳು, ಅಲ್ಲಿನ ಅಂತರರಾಷ್ಟ್ರೀಯ ವಿಚಾರಗೋಷ್ಠಿಗಳಿಂದ ರೈತರಿಗೆ ಆಗುವ ಪ್ರಯೋಜನ ಅಷ್ಟಕ್ಕಷ್ಟೇ!