<p>ಅರಣ್ಯ ಸಚಿವ ಸಿ.ಪಿ.ಯೋಗೀಶ್ವರ್ ಅವರು ಮಂಗಳವಾರ ಕನಕಪುರ ತಾಲ್ಲೂಕಿನ ಅರಣ್ಯ ಪ್ರದೇಶಗಳಲ್ಲಿ ನಡೆಯುತ್ತಿರುವ ಗಣಿಗಾರಿಕೆ ಪ್ರದೇಶಗಳಿಗೆ ದಿಢೀರ್ ದಾಳಿ ನಡೆಸಿ ಅಲ್ಲಿನ ಅಕ್ರಮ ವ್ಯವಹಾರಗಳನ್ನು ಕಂಡು ಅಸಮಾಧಾನ ವ್ಯಕ್ತಪಡಿಸಿರುವುದು ಪತ್ರಿಕೆಗಳಲ್ಲಿ ವರದಿಯಾಗಿದೆ. <br /> <br /> ಯೋಗೀಶ್ವರ್ ಅವರು ರಾಮನಗರ ಜಿಲ್ಲೆಯ ರಾಜಕಾರಣಿ. ಬಿಜೆಪಿಗೆ ಬರುವ ಮುನ್ನ ಕಾಂಗ್ರೆಸ್ನಲ್ಲಿ ಇದ್ದವರು. ತಮ್ಮ `ಬೇಳೆ~ ಬೇಯಿಸಿಕೊಳ್ಳುವ ರಾಜಕಾರಣಕ್ಕಾಗಿ ಬಿಜೆಪಿಗೆ ಬಂದು ಮಂತ್ರಿಯಾದರು ಎಂಬುದು ಇಡೀ ರಾಜ್ಯಕ್ಕೆ ಗೊತ್ತು. ಚುನಾವಣೆ ಹತ್ತಿರ ಬರುತ್ತಿರುವ ವಾಸನೆ ಹಿಡಿದು ಜಿಲ್ಲೆಯ ಅರಣ್ಯದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಬಗ್ಗೆ ಮಾತನಾಡಲು ಆರಂಭಿಸಿದ್ದಾರೆ.<br /> <br /> ರಾಮನಗರ ಜಿಲ್ಲೆಯ ಗಣಿಗಾರಿಕೆ ಇಂದು ನಿನ್ನೆಯದಲ್ಲ. ಜನಾರ್ದನ ರೆಡ್ಡಿ ಗಣಿ ಅಕ್ರಮಕ್ಕಾಗಿ ಜೈಲು ಕಂಬಿ ಎಣಿಸುತ್ತಿದ್ದಾರೆ. ಅವರು ಬಿಜೆಪಿಯವರು ಎಂಬುದನ್ನೇ ಯೋಗೀಶ್ವರ್ ಮರೆತಿದ್ದಾರೆ. ಗಣಿ ಅಕ್ರಮಗಳ ಬಗ್ಗೆ ನಿಷ್ಠುರವಾಗಿ ಮಾತನಾಡುವ ಮತ್ತು ಕ್ರಮ ಕೈಗೊಳ್ಳುವ ಶಕ್ತಿ ಸಚಿವರಿಗೆ ಇದೆಯೇ?<br /> <br /> ಅಕ್ರಮ ಗಣಿಗಾರಿಕೆಯ ಕಾರಣದಿಂದಲೇ ಇವತ್ತು ಆನೆಗಳೂ ಸೇರಿದಂತೆ ಅನೇಕ ಕಾಡು ಪ್ರಾಣಿಗಳು ನಾಡಿನ ಕಡೆಗೆ ಬರುತ್ತಿವೆ ಎಂಬ ಮಾತನ್ನೂ ಸಚಿವರೇ ಆಡಿದ್ದಾರೆ. ಈ ನುಡಿ ಮುತ್ತುಗಳನ್ನು ಸಚಿವರು ಇಷ್ಟು ದಿನ ಏಕೆ ಆಡಲಿಲ್ಲವೋ?</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಅರಣ್ಯ ಸಚಿವ ಸಿ.ಪಿ.ಯೋಗೀಶ್ವರ್ ಅವರು ಮಂಗಳವಾರ ಕನಕಪುರ ತಾಲ್ಲೂಕಿನ ಅರಣ್ಯ ಪ್ರದೇಶಗಳಲ್ಲಿ ನಡೆಯುತ್ತಿರುವ ಗಣಿಗಾರಿಕೆ ಪ್ರದೇಶಗಳಿಗೆ ದಿಢೀರ್ ದಾಳಿ ನಡೆಸಿ ಅಲ್ಲಿನ ಅಕ್ರಮ ವ್ಯವಹಾರಗಳನ್ನು ಕಂಡು ಅಸಮಾಧಾನ ವ್ಯಕ್ತಪಡಿಸಿರುವುದು ಪತ್ರಿಕೆಗಳಲ್ಲಿ ವರದಿಯಾಗಿದೆ. <br /> <br /> ಯೋಗೀಶ್ವರ್ ಅವರು ರಾಮನಗರ ಜಿಲ್ಲೆಯ ರಾಜಕಾರಣಿ. ಬಿಜೆಪಿಗೆ ಬರುವ ಮುನ್ನ ಕಾಂಗ್ರೆಸ್ನಲ್ಲಿ ಇದ್ದವರು. ತಮ್ಮ `ಬೇಳೆ~ ಬೇಯಿಸಿಕೊಳ್ಳುವ ರಾಜಕಾರಣಕ್ಕಾಗಿ ಬಿಜೆಪಿಗೆ ಬಂದು ಮಂತ್ರಿಯಾದರು ಎಂಬುದು ಇಡೀ ರಾಜ್ಯಕ್ಕೆ ಗೊತ್ತು. ಚುನಾವಣೆ ಹತ್ತಿರ ಬರುತ್ತಿರುವ ವಾಸನೆ ಹಿಡಿದು ಜಿಲ್ಲೆಯ ಅರಣ್ಯದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಬಗ್ಗೆ ಮಾತನಾಡಲು ಆರಂಭಿಸಿದ್ದಾರೆ.<br /> <br /> ರಾಮನಗರ ಜಿಲ್ಲೆಯ ಗಣಿಗಾರಿಕೆ ಇಂದು ನಿನ್ನೆಯದಲ್ಲ. ಜನಾರ್ದನ ರೆಡ್ಡಿ ಗಣಿ ಅಕ್ರಮಕ್ಕಾಗಿ ಜೈಲು ಕಂಬಿ ಎಣಿಸುತ್ತಿದ್ದಾರೆ. ಅವರು ಬಿಜೆಪಿಯವರು ಎಂಬುದನ್ನೇ ಯೋಗೀಶ್ವರ್ ಮರೆತಿದ್ದಾರೆ. ಗಣಿ ಅಕ್ರಮಗಳ ಬಗ್ಗೆ ನಿಷ್ಠುರವಾಗಿ ಮಾತನಾಡುವ ಮತ್ತು ಕ್ರಮ ಕೈಗೊಳ್ಳುವ ಶಕ್ತಿ ಸಚಿವರಿಗೆ ಇದೆಯೇ?<br /> <br /> ಅಕ್ರಮ ಗಣಿಗಾರಿಕೆಯ ಕಾರಣದಿಂದಲೇ ಇವತ್ತು ಆನೆಗಳೂ ಸೇರಿದಂತೆ ಅನೇಕ ಕಾಡು ಪ್ರಾಣಿಗಳು ನಾಡಿನ ಕಡೆಗೆ ಬರುತ್ತಿವೆ ಎಂಬ ಮಾತನ್ನೂ ಸಚಿವರೇ ಆಡಿದ್ದಾರೆ. ಈ ನುಡಿ ಮುತ್ತುಗಳನ್ನು ಸಚಿವರು ಇಷ್ಟು ದಿನ ಏಕೆ ಆಡಲಿಲ್ಲವೋ?</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>