ದೆಹಲಿಯಲ್ಲಿ ನಡೆದ ಅತ್ಯಾಚಾರದ ನಂತರ ಹಲವಾರು ಘಟನೆಗಳು ನಡೆಯುತ್ತಿವೆ. ನಾಯಕರು ಅಪ್ರಬುದ್ಧ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ವಿದ್ಯಾರ್ಥಿಗಳು ನ್ಯಾಯ ಕೇಳುತ್ತಿದ್ದಾರೆ. ನಾನು ಒಂದು ವೃತ್ತಪತ್ರಿಕೆಯಲ್ಲಿ ಓದಿದ್ದೆ, ಉತ್ತರ ಭಾರತದಲ್ಲಿ ಗುಲಾಬಿ ಗ್ಯಾಂಗ್ ಎಂಬ ಹೆಂಗಸರ ಗುಂಪು, ಅತ್ಯಾಚಾರಿಗಳಿಗೆ, ಭ್ರಷ್ಟರಿಗೆ, ರಾಜಕಾರಣಿಗಳಿಗೆ, ಗುತ್ತಿಗೆದಾರರಿಗೆ, ಹೀಗೆ ಎಲ್ಲರಿಗೂ ಸಿಂಹಸ್ವಪ್ನವಾಗಿದ್ದಾರೆ.