ಸಾರ್ವಜನಿಕ ಸ್ಥಳಗಳಲ್ಲಿ ಕಸ ಹಾಕುವವರಿಗೆ, ಮಲಮೂತ್ರ ವಿಸರ್ಜನೆ ಮಾಡುವವರಿಗೆ ರಾಜಸ್ತಾನದ ಮಾದರಿಯಲ್ಲಿ ದಂಡ ವಿಧಿಸಬೇಕೆಂಬ ಕೇಂದ್ರ ನಗರಾಭಿವೃದ್ಧಿ ಇಲಾಖೆಯ ಸೂಚನೆ ಶ್ಲಾಘನೀಯ. ಅನವಶ್ಯಕವಾಗಿ ನೀರನ್ನು ಪೋಲು ಮಾಡುವವರಿಗೂ ಇದೇ ರೀತಿ ದಂಡ ಹಾಕಬೇಕು. ಈ ನಿಟ್ಟಿನಲ್ಲಿ ಕೇಂದ್ರ ಜಲಸಂಪನ್ಮೂಲ ಇಲಾಖೆ ಕ್ರಮ ಕೈಗೊಳ್ಳಬೇಕು.
ನೈರ್ಮಲ್ಯಕ್ಕೆ ಸಂಬಂಧಿಸಿದಂತೆ ದಿಟ್ಟ ಕ್ರಮ ಕೈಗೊಳ್ಳಲು ಮುಂದಾಗಿರುವ ಸರ್ಕಾರ, ಜನಸಂಖ್ಯೆ ತೀವ್ರವಾಗಿ ಬೆಳೆಯುತ್ತಿರುವ ದಿನಗಳಲ್ಲಿ ನೀರಿಗಾಗಿ ಇರುವ ಹಾಹಾಕಾರ ತಡೆಯುವತ್ತಲೂ ಗಮನಹರಿಸಬೇಕಾಗಿದೆ.