ಮಹಿಳೆಯರು ಮತ್ತು ಮಕ್ಕಳ ಮೇಲೆ ದೌರ್ಜನ್ಯಗಳು ಹೆಚ್ಚುತ್ತಿವೆಯೇ ಹೊರತು ಕಡಿಮೆ ಆಗುತ್ತಿಲ್ಲ. ಈ ಸಂಬಂಧದ ಪ್ರಕರಣಗಳು ದಾಖಲಾದರೂ ಅದರಿಂದ ಏನೂ ಪ್ರಯೋಜನವಾಗುತ್ತಿಲ್ಲ. ಹೀಗಾದರೆ ಮಹಿಳೆಯರಿಗೆ ಮತ್ತು ಮಕ್ಕಳಿಗೆ ಸುರಕ್ಷೆಯ ವಾತಾವರಣ ರೂಪಿಸುವುದು ಯಾವಾಗ?
ಮಹಿಳೆಯರು ಮತ್ತು ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಮಹಿಳಾ ಆಯೋಗವು ಜಿಲ್ಲಾ ಮಟ್ಟದಲ್ಲಿ ‘ಮಹಿಳಾ ಜಾಗೃತಿ ದಳ’ ರಚಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದೆ. ಆದರೆ ಈ ಪ್ರಸ್ತಾವವನ್ನು ಸರ್ಕಾರ ಮೂಲೆಗುಂಪು ಮಾಡಿದೆ. ಈ ಬಗ್ಗೆ ಸರ್ಕಾರ ಇನ್ನಾದರೂ ಕ್ರಮ ಕೈಗೊಳ್ಳಲಿ.