<p>ಗ್ರಾಮೀಣ ಪ್ರದೇಶದ ಜನರ ಬದುಕು ಹಸನು ಆಗಲಿ ಎಂದು ಜಾರಿಗೆ ತಂದ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯು ಸಂಪೂರ್ಣವಾಗಿ ದಿಕ್ಕು ತಪ್ಪಿದೆ. ಯೋಜನೆಯ ನಿಯಮಗಳನ್ನೆಲ್ಲ ಗಾಳಿಗೆ ತೂರಲಾಗಿದೆ.<br /> <br /> ನಿಯಮಬಾಹಿರ ಚಟುವಟಿಕೆಗಳು ನಡೆಯುತ್ತಿವೆ. ಕೆಲ ಪಟ್ಟಭದ್ರ ಹಿತಾಸಕ್ತಿಗಳು ನಕಲಿ ಜಾಬ್ಕಾರ್ಡ್ ಸೃಷ್ಟಿಸಿ ಕಾಮಗಾರಿಯ ದುಡ್ಡನ್ನು ಕೊಳ್ಳೆಹೊಡೆಯುತ್ತಿದ್ದಾರೆ. ಇಷ್ಟೆಲ್ಲ ಗೊತ್ತಿದ್ದರೂ ಅಧಿಕಾರಿಗಳು ಜಾಣ ಕುರುಡುತನ ಪ್ರದರ್ಶಿಸುತ್ತಿದ್ದಾರೆ. ಕೆಲವೊಂದು ಕಡೆ ಜೆಸಿಬಿ ಮೂಲಕ ಕೆಲಸ ಮಾಡಿಸಿ ಖಾತೆದಾರರ ಹೆಸರಲ್ಲಿ ನಕಲಿ ಬಿಲ್ ಸಿದ್ಧಪಡಿಸುತ್ತಿದ್ದಾರೆ.<br /> <br /> ಅಲ್ಲದೆ ಹಲವಾರು ಕಡೆ ಅಧಿಕಾರಿಗಳ ಸಂಬಂಧಿಕರೇ ಜಾಬ್ ಕಾರ್ಡ್ ಹೊಂದಿದ್ದಾರೆ. ಇನ್ನು ಕೆಲವು ಕಡೆ ಕಾನೂನು ಬದ್ಧ ಜಾಬ್ಕಾರ್ಡ್ ಹೊಂದಿರುವ ಅಮಾಯಕ ಜನರೊಂದಿಗೆ ಶಾಮೀಲಾಗಿ ಕೆಲ ಗ್ರಾಮ ಪಂಚಾಯ್ತಿ ಸಿಬ್ಬಂದಿ ಹಣ ಲಪಟಾಯಿಸುತ್ತಿದ್ದಾರೆ. ಒಟ್ಟಾರೆಯಾಗಿ ಅವ್ಯವಹಾರದ ಆಗರವಾಗಿರುವ ಈ ಯೋಜನೆಗೆ ಕೇಂದ್ರ ಸರ್ಕಾರ ತುರ್ತಾಗಿ ಚಿಕಿತ್ಸೆ ನೀಡಬೇಕಾಗಿದೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗ್ರಾಮೀಣ ಪ್ರದೇಶದ ಜನರ ಬದುಕು ಹಸನು ಆಗಲಿ ಎಂದು ಜಾರಿಗೆ ತಂದ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯು ಸಂಪೂರ್ಣವಾಗಿ ದಿಕ್ಕು ತಪ್ಪಿದೆ. ಯೋಜನೆಯ ನಿಯಮಗಳನ್ನೆಲ್ಲ ಗಾಳಿಗೆ ತೂರಲಾಗಿದೆ.<br /> <br /> ನಿಯಮಬಾಹಿರ ಚಟುವಟಿಕೆಗಳು ನಡೆಯುತ್ತಿವೆ. ಕೆಲ ಪಟ್ಟಭದ್ರ ಹಿತಾಸಕ್ತಿಗಳು ನಕಲಿ ಜಾಬ್ಕಾರ್ಡ್ ಸೃಷ್ಟಿಸಿ ಕಾಮಗಾರಿಯ ದುಡ್ಡನ್ನು ಕೊಳ್ಳೆಹೊಡೆಯುತ್ತಿದ್ದಾರೆ. ಇಷ್ಟೆಲ್ಲ ಗೊತ್ತಿದ್ದರೂ ಅಧಿಕಾರಿಗಳು ಜಾಣ ಕುರುಡುತನ ಪ್ರದರ್ಶಿಸುತ್ತಿದ್ದಾರೆ. ಕೆಲವೊಂದು ಕಡೆ ಜೆಸಿಬಿ ಮೂಲಕ ಕೆಲಸ ಮಾಡಿಸಿ ಖಾತೆದಾರರ ಹೆಸರಲ್ಲಿ ನಕಲಿ ಬಿಲ್ ಸಿದ್ಧಪಡಿಸುತ್ತಿದ್ದಾರೆ.<br /> <br /> ಅಲ್ಲದೆ ಹಲವಾರು ಕಡೆ ಅಧಿಕಾರಿಗಳ ಸಂಬಂಧಿಕರೇ ಜಾಬ್ ಕಾರ್ಡ್ ಹೊಂದಿದ್ದಾರೆ. ಇನ್ನು ಕೆಲವು ಕಡೆ ಕಾನೂನು ಬದ್ಧ ಜಾಬ್ಕಾರ್ಡ್ ಹೊಂದಿರುವ ಅಮಾಯಕ ಜನರೊಂದಿಗೆ ಶಾಮೀಲಾಗಿ ಕೆಲ ಗ್ರಾಮ ಪಂಚಾಯ್ತಿ ಸಿಬ್ಬಂದಿ ಹಣ ಲಪಟಾಯಿಸುತ್ತಿದ್ದಾರೆ. ಒಟ್ಟಾರೆಯಾಗಿ ಅವ್ಯವಹಾರದ ಆಗರವಾಗಿರುವ ಈ ಯೋಜನೆಗೆ ಕೇಂದ್ರ ಸರ್ಕಾರ ತುರ್ತಾಗಿ ಚಿಕಿತ್ಸೆ ನೀಡಬೇಕಾಗಿದೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>