ರೈತರ ಬಗ್ಗೆ ನಿಜವಾದ ಕಾಳಜಿ ಇದ್ದರೆ ಕೃಷಿಯನ್ನು ಒಂದು ಉದ್ಯಮವನ್ನಾಗಿ ಪರಿಗಣಿಸಿ, ರೈತರಿಗೆ ಸಕಾಲದಲ್ಲಿ, ರಿಯಾಯಿತಿ ದರದಲ್ಲಿ ಉತ್ತಮ ಬಿತ್ತನೆ ಬೀಜ, ರಸಗೊಬ್ಬರ, ಕೃಷಿ ಉಪಕರಣಗಳನ್ನು ನೀಡುವುದರ ಜೊತೆಗೆ ನಿಯಮಿತವಾಗಿ ನೀರು ಹಾಗೂ ವಿದ್ಯುತ್ತನ್ನು ಪೂರೈಸಬೇಕು. ಕಾಲಕಾಲಕ್ಕೆ ಕೃಷಿ ವಿಜ್ಞಾನಿಗಳಿಂದ ಸಲಹೆ ಸೂಚನೆ ಕೊಡಿಸುವ ವ್ಯವಸ್ಥೆ ಮಾಡಬೇಕು.