ಈ ವಿಚಾರದಲ್ಲಿ ನೂರಾರು ಪ್ರಕರಣಗಳು ದಾಖಲಾಗುತ್ತಲೇ ಇರುತ್ತವೆ. ಇವುಗಳು ಸುದ್ದಿಯಾಗುತ್ತಲೇ ಇರುತ್ತವೆ. ಚುನಾವಣೆ ನೀತಿಸಂಹಿತೆ ಉಲ್ಲಂಘನೆಯಾದ ವಿಚಾರ ತಿಳಿದೊಡನೆ ಆಯಾ ವಲಯದ ಸೆಕ್ಟರಲ್ ಮ್ಯಾಜಿಸ್ಟ್ರೇಟರು ಆಯಾ ಪ್ರದೇಶದ ಪೊಲೀಸ್ ಠಾಣೆಗೆ ಮಾಹಿತಿ ನೀಡುತ್ತಾರೆ. ಆ ಮಾಹಿತಿ ಆಧಾರದ ಮೇಲೆ ಪೊಲೀಸರು ನೀತಿ
ಸಂಹಿತೆ ಉಲ್ಲಂಘಿಸಿದವರ ವಿರುದ್ಧ ನ್ಯಾಯಾಲಯಕ್ಕೆ ಎಫ್.ಐ.ಆರ್. ಸಲ್ಲಿಸುತ್ತಾರೆ. ನಂತರ ಆ ಪ್ರಕರಣಗಳಲ್ಲಿ ಯಾರ ಯಾರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲಾಯಿತು, ಯಾರು ಯಾರಿಗೆ ಶಿಕ್ಷೆಯಾಯಿತು ಎಂಬ ವಿಚಾರವಾಗಿ ಯಾವ ಸುದ್ದಿಯೂ ಪ್ರಕಟವಾಗುವುದಿಲ್ಲ.