<p>ವಿಧಾನಸಭೆ, ಲೋಕಸಭೆ, ವಿಧಾನ ಪರಿಷತ್ತು ಇತ್ಯಾದಿ ಚುನಾವಣೆಗಳ ಸಂದರ್ಭದಲ್ಲಿ ಚುನಾವಣಾ ನೀತಿಸಂಹಿತೆ ಉಲ್ಲಂಘನೆಯಾಗುತ್ತಲೇ ಇರುತ್ತದೆ.</p>.<p>ಈ ವಿಚಾರದಲ್ಲಿ ನೂರಾರು ಪ್ರಕರಣಗಳು ದಾಖಲಾಗುತ್ತಲೇ ಇರುತ್ತವೆ. ಇವುಗಳು ಸುದ್ದಿಯಾಗುತ್ತಲೇ ಇರುತ್ತವೆ. ಚುನಾವಣೆ ನೀತಿಸಂಹಿತೆ ಉಲ್ಲಂಘನೆಯಾದ ವಿಚಾರ ತಿಳಿದೊಡನೆ ಆಯಾ ವಲಯದ ಸೆಕ್ಟರಲ್ ಮ್ಯಾಜಿಸ್ಟ್ರೇಟರು ಆಯಾ ಪ್ರದೇಶದ ಪೊಲೀಸ್ ಠಾಣೆಗೆ ಮಾಹಿತಿ ನೀಡುತ್ತಾರೆ. ಆ ಮಾಹಿತಿ ಆಧಾರದ ಮೇಲೆ ಪೊಲೀಸರು ನೀತಿ<br /> ಸಂಹಿತೆ ಉಲ್ಲಂಘಿಸಿದವರ ವಿರುದ್ಧ ನ್ಯಾಯಾಲಯಕ್ಕೆ ಎಫ್.ಐ.ಆರ್. ಸಲ್ಲಿಸುತ್ತಾರೆ. ನಂತರ ಆ ಪ್ರಕರಣಗಳಲ್ಲಿ ಯಾರ ಯಾರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲಾಯಿತು, ಯಾರು ಯಾರಿಗೆ ಶಿಕ್ಷೆಯಾಯಿತು ಎಂಬ ವಿಚಾರವಾಗಿ ಯಾವ ಸುದ್ದಿಯೂ ಪ್ರಕಟವಾಗುವುದಿಲ್ಲ.</p>.<p>ಪ್ರತಿಯೊಂದು ಕ್ಷೇತ್ರದಲ್ಲಿ ಚುನಾವಣಾ ನೀತಿಸಂಹಿತೆ ಉಲ್ಲಂಘನೆಯಾಗಿ ನೂರಾರು ಪ್ರಕರಣಗಳು ದಾಖಲಾಗಿದ್ದರೂ ಬೆರಳೆಣಿಕೆಯಷ್ಟು ಪ್ರಕರಣಗಳಲ್ಲಿಯೂ ದೋಷಾರೋಪ ಪಟ್ಟಿ ಸಲ್ಲಿಕೆಯಾಗುತ್ತಿಲ್ಲ. ಇಂತಹ ಪ್ರಕರಣಗಳಲ್ಲಿ ಆರೋಪಿಗಳಿಗೆ ಶಿಕ್ಷೆಯಾಗುವುದಂತೂ ಗಗನಕುಸುಮವೇ ಸರಿ! ಚುನಾವಣಾ ನೀತಿಸಂಹಿತೆ ಉಲ್ಲಂಘಿಸುವವರಿಗೆ ಶಿಕ್ಷೆ ಇಲ್ಲ ಎಂದಮೇಲೆ ಚುನಾವಣೆಗೊಂದು ‘ನೀತಿಸಂಹಿತೆ’ಯಾದರೂ ಏಕೆ ಬೇಕು?</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಿಧಾನಸಭೆ, ಲೋಕಸಭೆ, ವಿಧಾನ ಪರಿಷತ್ತು ಇತ್ಯಾದಿ ಚುನಾವಣೆಗಳ ಸಂದರ್ಭದಲ್ಲಿ ಚುನಾವಣಾ ನೀತಿಸಂಹಿತೆ ಉಲ್ಲಂಘನೆಯಾಗುತ್ತಲೇ ಇರುತ್ತದೆ.</p>.<p>ಈ ವಿಚಾರದಲ್ಲಿ ನೂರಾರು ಪ್ರಕರಣಗಳು ದಾಖಲಾಗುತ್ತಲೇ ಇರುತ್ತವೆ. ಇವುಗಳು ಸುದ್ದಿಯಾಗುತ್ತಲೇ ಇರುತ್ತವೆ. ಚುನಾವಣೆ ನೀತಿಸಂಹಿತೆ ಉಲ್ಲಂಘನೆಯಾದ ವಿಚಾರ ತಿಳಿದೊಡನೆ ಆಯಾ ವಲಯದ ಸೆಕ್ಟರಲ್ ಮ್ಯಾಜಿಸ್ಟ್ರೇಟರು ಆಯಾ ಪ್ರದೇಶದ ಪೊಲೀಸ್ ಠಾಣೆಗೆ ಮಾಹಿತಿ ನೀಡುತ್ತಾರೆ. ಆ ಮಾಹಿತಿ ಆಧಾರದ ಮೇಲೆ ಪೊಲೀಸರು ನೀತಿ<br /> ಸಂಹಿತೆ ಉಲ್ಲಂಘಿಸಿದವರ ವಿರುದ್ಧ ನ್ಯಾಯಾಲಯಕ್ಕೆ ಎಫ್.ಐ.ಆರ್. ಸಲ್ಲಿಸುತ್ತಾರೆ. ನಂತರ ಆ ಪ್ರಕರಣಗಳಲ್ಲಿ ಯಾರ ಯಾರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲಾಯಿತು, ಯಾರು ಯಾರಿಗೆ ಶಿಕ್ಷೆಯಾಯಿತು ಎಂಬ ವಿಚಾರವಾಗಿ ಯಾವ ಸುದ್ದಿಯೂ ಪ್ರಕಟವಾಗುವುದಿಲ್ಲ.</p>.<p>ಪ್ರತಿಯೊಂದು ಕ್ಷೇತ್ರದಲ್ಲಿ ಚುನಾವಣಾ ನೀತಿಸಂಹಿತೆ ಉಲ್ಲಂಘನೆಯಾಗಿ ನೂರಾರು ಪ್ರಕರಣಗಳು ದಾಖಲಾಗಿದ್ದರೂ ಬೆರಳೆಣಿಕೆಯಷ್ಟು ಪ್ರಕರಣಗಳಲ್ಲಿಯೂ ದೋಷಾರೋಪ ಪಟ್ಟಿ ಸಲ್ಲಿಕೆಯಾಗುತ್ತಿಲ್ಲ. ಇಂತಹ ಪ್ರಕರಣಗಳಲ್ಲಿ ಆರೋಪಿಗಳಿಗೆ ಶಿಕ್ಷೆಯಾಗುವುದಂತೂ ಗಗನಕುಸುಮವೇ ಸರಿ! ಚುನಾವಣಾ ನೀತಿಸಂಹಿತೆ ಉಲ್ಲಂಘಿಸುವವರಿಗೆ ಶಿಕ್ಷೆ ಇಲ್ಲ ಎಂದಮೇಲೆ ಚುನಾವಣೆಗೊಂದು ‘ನೀತಿಸಂಹಿತೆ’ಯಾದರೂ ಏಕೆ ಬೇಕು?</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>