ಗುರುವಾರ, 16 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಶು ಪಕ್ಷಿಗಾಗಿ...

Last Updated 23 ಫೆಬ್ರುವರಿ 2016, 19:30 IST
ಅಕ್ಷರ ಗಾತ್ರ

ಬೇಸಿಗೆ ಈಗಾಗಲೆ ಪ್ರಾರಂಭವಾಗಿದೆ. ಬಿಸಿಲಿನ ಪ್ರಖರತೆಗೆ ಕೆರೆಕಟ್ಟೆ, ನದಿಗಳ ಒಡಲು ಬರಿದಾಗುತ್ತಿದೆ. ನೀರಿನ ಬವಣೆ ಪ್ರಾರಂಭವಾಗಿದೆ. ಮನುಷ್ಯರಾದರೋ ನೀರನ್ನು ಸಂಗ್ರಹಿಸಿ ಬಳಕೆ ಮಾಡುತ್ತಾರೆ. ಆದರೆ ಜಾನುವಾರುಗಳು, ಪಕ್ಷಿಗಳು?

ಕೆಲವು ದಯಾಳುಗಳು ತಮ್ಮ ಮನೆಯ ಮುಂದಿನ ಮರಗಳಿಗೆ ಮಣ್ಣಿನ ಪಾತ್ರೆಗಳನ್ನು ತೂಗು ಹಾಕಿ ನಿತ್ಯವೂ ನೀರು ತುಂಬಿಸಿ ಪಕ್ಷಿಗಳ ದಾಹ ತಣಿಸುತ್ತಿದ್ದಾರೆ. ನಿಜಕ್ಕೂ ಇದು ಮೇಲ್ಪಂಕ್ತಿ.

ಬೇಸಿಗೆಯಲ್ಲಿ ನೀರಿಗಾಗಿ ತಡಬಡಾಯಿಸುವ ನಾವು ಪಶುಪಕ್ಷಿಗಳ ಬಗ್ಗೆ ಗಮನವನ್ನೇ ಹರಿಸುವುದಿಲ್ಲ. ಬೇಸಿಗೆಯಲ್ಲಿ ಇದ್ದ ನೀರಿನ ಮೂಲಗಳು ಬತ್ತಿದಾಗ ಅವುಗಳ ಗೋಳು ಹೇಳತೀರದು. ಹಾಗಾಗಿ ಪ್ರತಿಯೊಬ್ಬರೂ ಪಶು ಪಕ್ಷಿಗಾಗಿ ತಮ್ಮ ಮನೆಯ ಮುಂಭಾಗದಲ್ಲಿ ಸಣ್ಣ ಪಾತ್ರೆಯಲ್ಲಿ ನೀರು ತುಂಬಿಸಿಟ್ಟು ಮಾನವೀಯತೆ ಮೆರೆಯೋಣ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT