ಸರ್ಕಾರಿ ಶಾಲೆಗಳಲ್ಲಿ ಹಿಂದೆ ಮಳೆನೀರು ಸಂಗ್ರಹ ಯೋಜನೆಯನ್ನು ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸಲಾಗಿತ್ತು. ಈಗ ಈ ಯೋಜನೆ ನಿಂತುಹೋಗಿದೆ. ರಾಜ್ಯದ ಎಲ್ಲ ಕಡೆ ಈಗ ಮಳೆಯಾಗುತ್ತಿದೆ. ಆದರೆ ಕುಡಿಯುವ ನೀರಿನ ಸಮಸ್ಯೆ ಬಗೆಹರಿದಿಲ್ಲ. ಸರ್ಕಾರಿ ಶಾಲೆಗಳಲ್ಲೂ ಈ ಸಮಸ್ಯೆಯನ್ನು ನಾವು ಎದುರಿಸುತ್ತಿದ್ದೇವೆ.
ಸರ್ಕಾರ ಮಳೆನೀರು ಸಂಗ್ರಹ ಯೋಜನೆಯನ್ನು ಎಲ್ಲ ಸರ್ಕಾರಿ ಶಾಲೆಗಳಲ್ಲಿ ಪ್ರಾಯೋಗಿಕವಾಗಿ ಪುನರಾರಂಭ ಮಾಡುವ ಮೂಲಕ ಅಕ್ಷರದಾಸೋಹ, ಸ್ವಚ್ಛತೆ, ಶೌಚಾಲಯ, ಕುಡಿಯುವ ನೀರು, ಶಾಲಾ ಕೈತೋಟಕ್ಕೆ ಅದನ್ನು ಬಳಸಿಕೊಳ್ಳುವಂತೆ ಆಗಬೇಕು.