<p>ಕೇಂದ್ರದ ಹೊಸ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಪಾಲ್ಗೊಳ್ಳದೆ ಇರುವುದನ್ನು ‘ಮಹಾಪ್ರಮಾದ’ (ಪ್ರ.ವಾ.ಸಂಪಾದಕೀಯ, ಮೇ 27) ಎಂದು ಪರಿಗಣಿಸುವುದು ಸೂಕ್ತವಲ್ಲ.<br /> <br /> ನಮ್ಮ ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಮತ್ತು ರಾಜ್ಯಗಳ ಸಂಬಂಧ ಸಮಾನ ನೆಲೆಯದ್ದು. ಕೇಂದ್ರದಿಂದ ಸಂವಿಧಾನಬದ್ಧ ಅನುದಾನ ಮತ್ತು ಇತರ ಸೌಲಭ್ಯಗಳನ್ನು ಪಡೆಯುವುದು ಪ್ರತಿ ರಾಜ್ಯದ ಹಕ್ಕು. ಸೌಜನ್ಯದ ದೃಷ್ಟಿಯಿಂದ ಮಾತ್ರ ಈ ಸಮಾರಂಭದಲ್ಲಿ ಭಾಗವಹಿಸದಿರುವುದನ್ನು ಪ್ರಶ್ನಿಸಬಹುದು. ಆದರೆ ಕೇಂದ್ರದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರನ್ನು ಮೆಚ್ಚಿಸಿ ಹೆಚ್ಚಿನ ಅನುದಾನ ನಿರೀಕ್ಷಿಸುವುದು ಸರಿಯಾದುದಲ್ಲ. ಇದು ಭೂಮಾಲೀಕ ಮತ್ತು ಗೇಣಿದಾರರ ನಡುವಣ ಸಂಬಂಧವನ್ನು ನೆನಪಿಸುತ್ತದೆ. ಇದು ಯಾವ ರಾಜ್ಯದ ಘನತೆಗೂ ತಕ್ಕುದಾದ ನಡವಳಿಕೆಯಲ್ಲ.<br /> <br /> ಹಾಗೆಂದೇ ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ, ಒಡಿಶಾ ರಾಜ್ಯದ ಮುಖ್ಯಮಂತ್ರಿಗಳು ತಮ್ಮ ಪೂರ್ವನಿರ್ಧರಿತ ಕಾರ್ಯಕ್ರಮಗಳತ್ತಲೇ ಗಮನಕೊಟ್ಟು ಈ ಸಮಾರಂಭದಲ್ಲಿ ಭಾಗವಹಿಸಲಿಲ್ಲ. ಈ ಹಿಂದೆ ಸ್ವತಃ ನರೇಂದ್ರ ಮೋದಿಯವರೇ ಕೇಂದ್ರದ ಇಂತಹ ಕಾರ್ಯಕ್ರಮಗಳಿಗೆ ಗೈರುಹಾಜರಾದ ಉದಾಹರಣೆಗಳಿವೆ. ಹೀಗಾಗಿ ಸಿದ್ದರಾಮಯ್ಯ ಕೇಂದ್ರದ ಹೊಸ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸದೇ ಇರುವುದನ್ನು ಪ್ರಮಾದವೆಂದು ಪರಿಗಣಿಸಬೇಕಿಲ್ಲ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೇಂದ್ರದ ಹೊಸ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಪಾಲ್ಗೊಳ್ಳದೆ ಇರುವುದನ್ನು ‘ಮಹಾಪ್ರಮಾದ’ (ಪ್ರ.ವಾ.ಸಂಪಾದಕೀಯ, ಮೇ 27) ಎಂದು ಪರಿಗಣಿಸುವುದು ಸೂಕ್ತವಲ್ಲ.<br /> <br /> ನಮ್ಮ ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಮತ್ತು ರಾಜ್ಯಗಳ ಸಂಬಂಧ ಸಮಾನ ನೆಲೆಯದ್ದು. ಕೇಂದ್ರದಿಂದ ಸಂವಿಧಾನಬದ್ಧ ಅನುದಾನ ಮತ್ತು ಇತರ ಸೌಲಭ್ಯಗಳನ್ನು ಪಡೆಯುವುದು ಪ್ರತಿ ರಾಜ್ಯದ ಹಕ್ಕು. ಸೌಜನ್ಯದ ದೃಷ್ಟಿಯಿಂದ ಮಾತ್ರ ಈ ಸಮಾರಂಭದಲ್ಲಿ ಭಾಗವಹಿಸದಿರುವುದನ್ನು ಪ್ರಶ್ನಿಸಬಹುದು. ಆದರೆ ಕೇಂದ್ರದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರನ್ನು ಮೆಚ್ಚಿಸಿ ಹೆಚ್ಚಿನ ಅನುದಾನ ನಿರೀಕ್ಷಿಸುವುದು ಸರಿಯಾದುದಲ್ಲ. ಇದು ಭೂಮಾಲೀಕ ಮತ್ತು ಗೇಣಿದಾರರ ನಡುವಣ ಸಂಬಂಧವನ್ನು ನೆನಪಿಸುತ್ತದೆ. ಇದು ಯಾವ ರಾಜ್ಯದ ಘನತೆಗೂ ತಕ್ಕುದಾದ ನಡವಳಿಕೆಯಲ್ಲ.<br /> <br /> ಹಾಗೆಂದೇ ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ, ಒಡಿಶಾ ರಾಜ್ಯದ ಮುಖ್ಯಮಂತ್ರಿಗಳು ತಮ್ಮ ಪೂರ್ವನಿರ್ಧರಿತ ಕಾರ್ಯಕ್ರಮಗಳತ್ತಲೇ ಗಮನಕೊಟ್ಟು ಈ ಸಮಾರಂಭದಲ್ಲಿ ಭಾಗವಹಿಸಲಿಲ್ಲ. ಈ ಹಿಂದೆ ಸ್ವತಃ ನರೇಂದ್ರ ಮೋದಿಯವರೇ ಕೇಂದ್ರದ ಇಂತಹ ಕಾರ್ಯಕ್ರಮಗಳಿಗೆ ಗೈರುಹಾಜರಾದ ಉದಾಹರಣೆಗಳಿವೆ. ಹೀಗಾಗಿ ಸಿದ್ದರಾಮಯ್ಯ ಕೇಂದ್ರದ ಹೊಸ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸದೇ ಇರುವುದನ್ನು ಪ್ರಮಾದವೆಂದು ಪರಿಗಣಿಸಬೇಕಿಲ್ಲ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>