<p>ರಾಜ್ಯದಲ್ಲಿ ಶೀಘ್ರದಲ್ಲೇ ಮುಂಗಾರು ಪ್ರವೇಶಿಸಲಿದ್ದು, ರೈತಸಮುದಾಯ ಹದಗೊಳಿಸಿರುವ ಜಮೀನಿನೊಂದಿಗೆ ಹರ್ಷೋನ್ಮುಖರಾಗಿ ಮುಂಗಾರು ಮಳೆಯನ್ನು ಸ್ವಾಗತಿಸಲು ಕಾತರರಾಗಿದ್ದಾರೆ.<br /> <br /> ಕೃಷಿಗೆ ಪೂರಕ ಬಿತ್ತನೆ ಬೀಜ, ಸಾವಯವ ಗೊಬ್ಬರ, ಕ್ರಿಮಿನಾಶಕ ರಾಸಾಯನಿಕಗಳನ್ನು ಪೂರೈಸುವುದು ಸರ್ಕಾರದ ಆದ್ಯಕರ್ತವ್ಯ. ಆದರೆ ರಾಜ್ಯದ ಅನೇಕ ತಾಲೂಕು ಕೃಷಿಕೇಂದ್ರಗಳಲ್ಲಿ ಸಾಕಷ್ಟು ಬಿತ್ತನೆ ಬೀಜ,ರಸಗೊಬ್ಬರಗಳ ದಾಸ್ತಾನು ಇಲ್ಲದಿರುವುದು ರೈತರನ್ನು ಆತಂಕಕ್ಕೆ ಈಡುಮಾಡಿದೆ.<br /> <br /> ಬರಗಾಲ, ಅತಿವೃಷ್ಟಿ,ಆಲಿಕಲ್ಲಿನ ಅಕಾಲ ಮಳೆಯಿಂದ ಪ್ರತಿವರ್ಷ ಒಂದಿಲ್ಲೊಂದು ರೀತಿ ನಷ್ಟದಲ್ಲಿರುವ ರೈತ ಈ ಬಾರಿಯಾದರೂ ಒಳ್ಳೆ ಫಸಲಿನ ನಿರೀಕ್ಷೆಯಲ್ಲಿದ್ದಾನೆ. ಸರ್ಕಾರ ರೈತರ ಬೇಡಿಕೆಗೆ ಅನುಗುಣವಾಗಿ ದಾಸ್ತಾನು ಒದಗಿಸಲಿ. ಕೃಷಿ ಅಧಿಕಾರಿಗಳು ರೈತರಿಗೆ ಲಾಭಕರ ಬೆಳೆಗಳ ಬಗ್ಗೆ ಮಾಹಿತಿಯನ್ನು ನೀಡಲಿ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಜ್ಯದಲ್ಲಿ ಶೀಘ್ರದಲ್ಲೇ ಮುಂಗಾರು ಪ್ರವೇಶಿಸಲಿದ್ದು, ರೈತಸಮುದಾಯ ಹದಗೊಳಿಸಿರುವ ಜಮೀನಿನೊಂದಿಗೆ ಹರ್ಷೋನ್ಮುಖರಾಗಿ ಮುಂಗಾರು ಮಳೆಯನ್ನು ಸ್ವಾಗತಿಸಲು ಕಾತರರಾಗಿದ್ದಾರೆ.<br /> <br /> ಕೃಷಿಗೆ ಪೂರಕ ಬಿತ್ತನೆ ಬೀಜ, ಸಾವಯವ ಗೊಬ್ಬರ, ಕ್ರಿಮಿನಾಶಕ ರಾಸಾಯನಿಕಗಳನ್ನು ಪೂರೈಸುವುದು ಸರ್ಕಾರದ ಆದ್ಯಕರ್ತವ್ಯ. ಆದರೆ ರಾಜ್ಯದ ಅನೇಕ ತಾಲೂಕು ಕೃಷಿಕೇಂದ್ರಗಳಲ್ಲಿ ಸಾಕಷ್ಟು ಬಿತ್ತನೆ ಬೀಜ,ರಸಗೊಬ್ಬರಗಳ ದಾಸ್ತಾನು ಇಲ್ಲದಿರುವುದು ರೈತರನ್ನು ಆತಂಕಕ್ಕೆ ಈಡುಮಾಡಿದೆ.<br /> <br /> ಬರಗಾಲ, ಅತಿವೃಷ್ಟಿ,ಆಲಿಕಲ್ಲಿನ ಅಕಾಲ ಮಳೆಯಿಂದ ಪ್ರತಿವರ್ಷ ಒಂದಿಲ್ಲೊಂದು ರೀತಿ ನಷ್ಟದಲ್ಲಿರುವ ರೈತ ಈ ಬಾರಿಯಾದರೂ ಒಳ್ಳೆ ಫಸಲಿನ ನಿರೀಕ್ಷೆಯಲ್ಲಿದ್ದಾನೆ. ಸರ್ಕಾರ ರೈತರ ಬೇಡಿಕೆಗೆ ಅನುಗುಣವಾಗಿ ದಾಸ್ತಾನು ಒದಗಿಸಲಿ. ಕೃಷಿ ಅಧಿಕಾರಿಗಳು ರೈತರಿಗೆ ಲಾಭಕರ ಬೆಳೆಗಳ ಬಗ್ಗೆ ಮಾಹಿತಿಯನ್ನು ನೀಡಲಿ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>