ರಾಜ್ಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕೆ. ರತ್ನಪ್ರಭಾ ಅವರು, ಬೀದರ್ ಜಿಲ್ಲೆಯಲ್ಲಿ ಕಾಮಗಾರಿಗಳನ್ನು ನಿಗದಿತ ಸಮಯದೊಳಗೆ ಪೂರ್ಣಗೊಳಿಸಲು ಸೂಚನೆ ಕೊಟ್ಟಿರುವ ಸುದ್ದಿ (ಪ್ರ.ವಾ., ಜುಲೈ 8) ಓದಿ ಮನಸ್ಸಿಗೆ ಕಳವಳವಾಯಿತು. ಕೆಲವು ಜಿಲ್ಲೆಗಳಲ್ಲಿ ಅನುದಾನ ಬಳಸಿ ಆಗಿದೆ. ಇನ್ನೂ ಒಂದಷ್ಟು ಕೊಡಿ ಎಂದು ಅವರು ಕೇಳುತ್ತಿದ್ದಾರೆ. ಆದರೆ, ನಮ್ಮ ಬೀದರ್ ಜಿಲ್ಲೆಯ ಜನಪ್ರತಿನಿಧಿಗಳು, ಅಧಿಕಾರಿಗಳು ಹೀಗೇಕೆ ನಿರ್ಲಕ್ಷ್ಯ ಮಾಡುತ್ತಿದ್ದಾರೆ?