<p>ರಾಜ್ಯ ಸರ್ಕಾರವು ಮುಸ್ಲಿಂ ಬಡ ಹೆಣ್ಣು ಮಕ್ಕಳ ಮದುವೆಗೆ ಆರ್ಥಿಕ ಸಹಾಯ ಒದಗಿಸಲು ಮುಂದೆ ಬಂದರೂ ವಿಧಿಸಿರುವ ಷರತ್ತುಗಳನ್ನು ಪೂರ್ಣವಾಗಿ ಪರಿಪಾಲಿಸು ವುದರಲ್ಲಿ ಬಹುತೇಕ ಮುಸ್ಲಿಂ ಕುಟುಂಬಗಳು ವಿಫಲರಾಗುವುದ ರಲ್ಲಿ ಅನುಮಾನವೇ ಇಲ್ಲ. ಆದರೂ ಸರ್ಕಾರದ ಉದ್ದೇಶ ಬಡವರಿಗೆ ಸಹಾಯ ಮಾಡುವುದು. ಈ ಹೊಸ ಯೋಜನೆಯನ್ನು ಸಮಾಜದ ಎಲ್ಲಾ ವರ್ಗದವರು ಸ್ವಾಗತಿಸಬೇಕು.<br /> <br /> ಮುಸ್ಲಿಂ ಹೆಣ್ಣು ಮಕ್ಕಳಿಂದ ಈ ಯೋಜನೆ ಪ್ರಾರಂಭವಾಗಲಿದೆ. ಇದು ಅಲ್ಪ ಸಂಖ್ಯಾತರ ಇಲಾಖೆಯಿಂದ ಪ್ರಾರಂಭವಾಗಿ ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ವರ್ಗಗಳಿಗೂ ಇದರ ಲಾಭ ಸಿಗಬೇಕು. ನಾನು ಮುಖ್ಯಮಂತ್ರಿಗಳಲ್ಲಿ ಕೇಳಿಕೊಳ್ಳುವುದೇನೆಂದರೆ ಆದಷ್ಟು ಮಟ್ಟಿಗೆ ಈ ಯೋಜನೆ ಸಮಾಜದ ಎಲ್ಲಾ ವರ್ಗಗಳ ಬಡವರಿಗೆ ಅನ್ವಯವಾಗುವಂತೆ ಮಾಡಬೇಕು.<br /> <br /> ಟಿಪ್ಪು ಸುಲ್ತಾನ್ರ ಕಾಲದಲ್ಲಿ ಬಡತನದಿಂದ ಮದುವೆ ಆಗದೆ ಇರುವ ಎಲ್ಲಾ ಹೆಣ್ಣು ಮಕ್ಕಳಿಗೆ ಸರ್ಕಾರವೇ ಮದುವೆ ಖರ್ಚನ್ನು ಕೊಡುವ ಆದೇಶವನ್ನು ಹೊರಡಿಸಲಾಗಿತ್ತು. ಸಾಮಾಜಿಕ ನ್ಯಾಯ ದೃಷ್ಟಿಯಲ್ಲಿಟ್ಟುಕೊಂಡು ಎಲ್ಲಾ ಹೆಣ್ಣು ಮಕ್ಕಳು ಈ ಯೋಜನೆ ಲಾಭ ಪಡೆದರೆ ಪೋಷಕರ ಆಶೀರ್ವಾದ ಸರ್ಕಾರಕ್ಕೆ ಸಿಗುವುದು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಜ್ಯ ಸರ್ಕಾರವು ಮುಸ್ಲಿಂ ಬಡ ಹೆಣ್ಣು ಮಕ್ಕಳ ಮದುವೆಗೆ ಆರ್ಥಿಕ ಸಹಾಯ ಒದಗಿಸಲು ಮುಂದೆ ಬಂದರೂ ವಿಧಿಸಿರುವ ಷರತ್ತುಗಳನ್ನು ಪೂರ್ಣವಾಗಿ ಪರಿಪಾಲಿಸು ವುದರಲ್ಲಿ ಬಹುತೇಕ ಮುಸ್ಲಿಂ ಕುಟುಂಬಗಳು ವಿಫಲರಾಗುವುದ ರಲ್ಲಿ ಅನುಮಾನವೇ ಇಲ್ಲ. ಆದರೂ ಸರ್ಕಾರದ ಉದ್ದೇಶ ಬಡವರಿಗೆ ಸಹಾಯ ಮಾಡುವುದು. ಈ ಹೊಸ ಯೋಜನೆಯನ್ನು ಸಮಾಜದ ಎಲ್ಲಾ ವರ್ಗದವರು ಸ್ವಾಗತಿಸಬೇಕು.<br /> <br /> ಮುಸ್ಲಿಂ ಹೆಣ್ಣು ಮಕ್ಕಳಿಂದ ಈ ಯೋಜನೆ ಪ್ರಾರಂಭವಾಗಲಿದೆ. ಇದು ಅಲ್ಪ ಸಂಖ್ಯಾತರ ಇಲಾಖೆಯಿಂದ ಪ್ರಾರಂಭವಾಗಿ ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ವರ್ಗಗಳಿಗೂ ಇದರ ಲಾಭ ಸಿಗಬೇಕು. ನಾನು ಮುಖ್ಯಮಂತ್ರಿಗಳಲ್ಲಿ ಕೇಳಿಕೊಳ್ಳುವುದೇನೆಂದರೆ ಆದಷ್ಟು ಮಟ್ಟಿಗೆ ಈ ಯೋಜನೆ ಸಮಾಜದ ಎಲ್ಲಾ ವರ್ಗಗಳ ಬಡವರಿಗೆ ಅನ್ವಯವಾಗುವಂತೆ ಮಾಡಬೇಕು.<br /> <br /> ಟಿಪ್ಪು ಸುಲ್ತಾನ್ರ ಕಾಲದಲ್ಲಿ ಬಡತನದಿಂದ ಮದುವೆ ಆಗದೆ ಇರುವ ಎಲ್ಲಾ ಹೆಣ್ಣು ಮಕ್ಕಳಿಗೆ ಸರ್ಕಾರವೇ ಮದುವೆ ಖರ್ಚನ್ನು ಕೊಡುವ ಆದೇಶವನ್ನು ಹೊರಡಿಸಲಾಗಿತ್ತು. ಸಾಮಾಜಿಕ ನ್ಯಾಯ ದೃಷ್ಟಿಯಲ್ಲಿಟ್ಟುಕೊಂಡು ಎಲ್ಲಾ ಹೆಣ್ಣು ಮಕ್ಕಳು ಈ ಯೋಜನೆ ಲಾಭ ಪಡೆದರೆ ಪೋಷಕರ ಆಶೀರ್ವಾದ ಸರ್ಕಾರಕ್ಕೆ ಸಿಗುವುದು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>