<p>ಮುಂಬರುವ ರಾಜ್ಯದ ಬಜೆಟ್ನಲ್ಲಿ ಮಠಗಳಿಗೆ ನೇರವಾಗಿ ಹಣ ನೀಡುವುದಿಲ್ಲವೆಂಬ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಿಲುವು ಸ್ವಾಗತಾರ್ಹವಾದುದು. ಅದರಲ್ಲೂ ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ, ಸರ್ಕಾರದ ಈ ನಿಲುವನ್ನು ಅವರು ಬಹಿರಂಗಪಡಿಸಿರುವುದು ಯೋಚಿಸಬೇಕಾದ ಅಂಶ.</p>.<p>ಏಕೆಂದರೆ, ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ದಿನಗಳಲ್ಲಿ, ರಾಜ್ಯದ ಹಲವಾರು ಮಠಗಳಿಗೆ ಸರ್ಕಾರದ ಬೊಕ್ಕಸದಿಂದ ನೂರಾರು ಕೋಟಿ ರೂಪಾಯಿಗಳ ದಾನ ನೀಡಿದ್ದರು ಎಂಬ ಟೀಕೆಯಂತೂ ಸಾರ್ವಜನಿಕ ಕ್ಷೇತ್ರದಲ್ಲಿ ಮೇಲಿಂದ ಮೇಲೆ ಕೇಳಿಬರುತ್ತಿರುವುದುಂಟು.</p>.<p>ಅದರಲ್ಲೂ ಅನುದಾನ ನೀಡಬೇಕೆಂದು ಯಾವ ಮಠವೂ ಬಿ.ಎಸ್.ವೈ.ಗೆ ಅರ್ಜಿ ಸಲ್ಲಿಸಿರಲಿಲ್ಲ ಎಂಬ ತಮ್ಮ ಸರಳ ಮಾತಿನ ಮೂಲಕ, ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದ ಕಾಲದ ಕೋಟಿ ಕೋಟಿಗಳ ಕೋಮುವಾದಿ ರಾಜಕೀಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಷ್ಟೇ ಸರಳವಾಗಿ ಬಹಿರಂಗಪಡಿಸಿದ್ದಾರೆ. ಮಠಗಳಿಗೆ ಈ ರೀತಿಯಾಗಿ ದಾನ ಮಾಡಿರುವ ಯಡಿಯೂರಪ್ಪನವರು ಚರ್ಚು ಮತ್ತು ಮಸೀದಿಗಳಿಗೂ ದಾನ ನೀಡಬಹುದಾಗಿತ್ತಲ್ಲವೆ?<br /> <strong>-ಡಾ. ಮ. ನ. ಜವರಯ್ಯ, ಮೈಸೂರು .</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮುಂಬರುವ ರಾಜ್ಯದ ಬಜೆಟ್ನಲ್ಲಿ ಮಠಗಳಿಗೆ ನೇರವಾಗಿ ಹಣ ನೀಡುವುದಿಲ್ಲವೆಂಬ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಿಲುವು ಸ್ವಾಗತಾರ್ಹವಾದುದು. ಅದರಲ್ಲೂ ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ, ಸರ್ಕಾರದ ಈ ನಿಲುವನ್ನು ಅವರು ಬಹಿರಂಗಪಡಿಸಿರುವುದು ಯೋಚಿಸಬೇಕಾದ ಅಂಶ.</p>.<p>ಏಕೆಂದರೆ, ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ದಿನಗಳಲ್ಲಿ, ರಾಜ್ಯದ ಹಲವಾರು ಮಠಗಳಿಗೆ ಸರ್ಕಾರದ ಬೊಕ್ಕಸದಿಂದ ನೂರಾರು ಕೋಟಿ ರೂಪಾಯಿಗಳ ದಾನ ನೀಡಿದ್ದರು ಎಂಬ ಟೀಕೆಯಂತೂ ಸಾರ್ವಜನಿಕ ಕ್ಷೇತ್ರದಲ್ಲಿ ಮೇಲಿಂದ ಮೇಲೆ ಕೇಳಿಬರುತ್ತಿರುವುದುಂಟು.</p>.<p>ಅದರಲ್ಲೂ ಅನುದಾನ ನೀಡಬೇಕೆಂದು ಯಾವ ಮಠವೂ ಬಿ.ಎಸ್.ವೈ.ಗೆ ಅರ್ಜಿ ಸಲ್ಲಿಸಿರಲಿಲ್ಲ ಎಂಬ ತಮ್ಮ ಸರಳ ಮಾತಿನ ಮೂಲಕ, ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದ ಕಾಲದ ಕೋಟಿ ಕೋಟಿಗಳ ಕೋಮುವಾದಿ ರಾಜಕೀಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಷ್ಟೇ ಸರಳವಾಗಿ ಬಹಿರಂಗಪಡಿಸಿದ್ದಾರೆ. ಮಠಗಳಿಗೆ ಈ ರೀತಿಯಾಗಿ ದಾನ ಮಾಡಿರುವ ಯಡಿಯೂರಪ್ಪನವರು ಚರ್ಚು ಮತ್ತು ಮಸೀದಿಗಳಿಗೂ ದಾನ ನೀಡಬಹುದಾಗಿತ್ತಲ್ಲವೆ?<br /> <strong>-ಡಾ. ಮ. ನ. ಜವರಯ್ಯ, ಮೈಸೂರು .</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>