<p>ಬಜೆಟ್ ಮಂಡನೆ ಹಿನ್ನೆಲೆಯಲ್ಲಿ ರಾಜ್ಯದ ಹಿಂದುಳಿದ ಹಾಗೂ ದಲಿತ ವರ್ಗಗಳ ಮಠಾಧೀಶರು, ಮುಖ್ಯಮಂತ್ರಿ ಸದಾನಂದ ಗೌಡರನ್ನು ಭೇಟಿಯಾಗಿ ಹಿಂದುಳಿದ ಮತ್ತು ದಲಿತವರ್ಗಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನಕ್ಕೆ ಮನವಿ ಮಾಡಿದ್ದಾರೆ.<br /> <br /> ಹಿಂದುಳಿದ ಮತ್ತು ದಲಿತ ವರ್ಗಗಳ ಅಭಿವೃದ್ಧಿ, ಯಾವುದೇ ಸರ್ಕಾರದ ಸಂವಿಧಾನಾತ್ಮಕ ಕರ್ತವ್ಯ ಆಗಿರುವುದರಿಂದ ಅದಕ್ಕಾಗಿ ಮಠಾಧಿಪತಿಗಳು ಮನವಿ ಸಲ್ಲಿಸುವ ಅಗತ್ಯ ಇರಲಿಲ್ಲ. ಈ ವರ್ಗಗಳ ಜನಸಂಖ್ಯೆಗೆ ಅನುಗುಣವಾಗಿ ಬಜೆಟ್ನಲ್ಲಿ ಅನುದಾನ ಘೋಷಣೆ ಮಾಡುವುದು ಸರ್ಕಾರದ ಕರ್ತವ್ಯವೇ ಆಗಿದೆ.<br /> <br /> ಕರ್ನಾಟಕದ ಪ್ರಸ್ತುತ ರಾಜಕೀಯ ಸಂದರ್ಭ ಮಠಾಧೀಶರ ಶಕ್ತಿ ಪ್ರದರ್ಶನದ ರಂಗವಾಗಿದೆ. ಈ ಬೆಳವಣಿಗೆಯನ್ನು ರಾಜ್ಯದ ಪ್ರಜ್ಞಾವಂತರು ಖಂಡಿತಾ ಮೆಚ್ಚುವುದಿಲ್ಲ. ಹಿಂದುಳಿದ ಮತ್ತು ದಲಿತ ವರ್ಗಗಳ ಮಠಾಧೀಶರ ಈ ಬಗೆಯ ಶಕ್ತಿ ಪ್ರದರ್ಶನ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪನವರು ನಡೆಸುತ್ತಿರುವ ಲಿಂಗಾಯತ ಮಠಾಧೀಶರ ಶಕ್ತಿ ಪ್ರದರ್ಶನಕ್ಕೆ ಪ್ರತ್ಯುತ್ತರ ಎಂಬುದು ನಿಸ್ಸಂದೇಹ. <br /> <br /> ಆದರೆ ಜಾತಿ ರಾಜಕೀಯದ ಶಕ್ತಿ ಪ್ರದರ್ಶನಕ್ಕೆ ಮಠಾಧೀಶರನ್ನು ಬಳಸಿಕೊಳ್ಳುತ್ತಿರುವುದು ಅತ್ಯಂತ ದುರದೃಷ್ಟಕರ ಮತ್ತು ನಾಚಿಕೆಗೇಡಿನ ಬೆಳವಣಿಗೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಜೆಟ್ ಮಂಡನೆ ಹಿನ್ನೆಲೆಯಲ್ಲಿ ರಾಜ್ಯದ ಹಿಂದುಳಿದ ಹಾಗೂ ದಲಿತ ವರ್ಗಗಳ ಮಠಾಧೀಶರು, ಮುಖ್ಯಮಂತ್ರಿ ಸದಾನಂದ ಗೌಡರನ್ನು ಭೇಟಿಯಾಗಿ ಹಿಂದುಳಿದ ಮತ್ತು ದಲಿತವರ್ಗಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನಕ್ಕೆ ಮನವಿ ಮಾಡಿದ್ದಾರೆ.<br /> <br /> ಹಿಂದುಳಿದ ಮತ್ತು ದಲಿತ ವರ್ಗಗಳ ಅಭಿವೃದ್ಧಿ, ಯಾವುದೇ ಸರ್ಕಾರದ ಸಂವಿಧಾನಾತ್ಮಕ ಕರ್ತವ್ಯ ಆಗಿರುವುದರಿಂದ ಅದಕ್ಕಾಗಿ ಮಠಾಧಿಪತಿಗಳು ಮನವಿ ಸಲ್ಲಿಸುವ ಅಗತ್ಯ ಇರಲಿಲ್ಲ. ಈ ವರ್ಗಗಳ ಜನಸಂಖ್ಯೆಗೆ ಅನುಗುಣವಾಗಿ ಬಜೆಟ್ನಲ್ಲಿ ಅನುದಾನ ಘೋಷಣೆ ಮಾಡುವುದು ಸರ್ಕಾರದ ಕರ್ತವ್ಯವೇ ಆಗಿದೆ.<br /> <br /> ಕರ್ನಾಟಕದ ಪ್ರಸ್ತುತ ರಾಜಕೀಯ ಸಂದರ್ಭ ಮಠಾಧೀಶರ ಶಕ್ತಿ ಪ್ರದರ್ಶನದ ರಂಗವಾಗಿದೆ. ಈ ಬೆಳವಣಿಗೆಯನ್ನು ರಾಜ್ಯದ ಪ್ರಜ್ಞಾವಂತರು ಖಂಡಿತಾ ಮೆಚ್ಚುವುದಿಲ್ಲ. ಹಿಂದುಳಿದ ಮತ್ತು ದಲಿತ ವರ್ಗಗಳ ಮಠಾಧೀಶರ ಈ ಬಗೆಯ ಶಕ್ತಿ ಪ್ರದರ್ಶನ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪನವರು ನಡೆಸುತ್ತಿರುವ ಲಿಂಗಾಯತ ಮಠಾಧೀಶರ ಶಕ್ತಿ ಪ್ರದರ್ಶನಕ್ಕೆ ಪ್ರತ್ಯುತ್ತರ ಎಂಬುದು ನಿಸ್ಸಂದೇಹ. <br /> <br /> ಆದರೆ ಜಾತಿ ರಾಜಕೀಯದ ಶಕ್ತಿ ಪ್ರದರ್ಶನಕ್ಕೆ ಮಠಾಧೀಶರನ್ನು ಬಳಸಿಕೊಳ್ಳುತ್ತಿರುವುದು ಅತ್ಯಂತ ದುರದೃಷ್ಟಕರ ಮತ್ತು ನಾಚಿಕೆಗೇಡಿನ ಬೆಳವಣಿಗೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>