ಎಷ್ಟೋ ವೃದ್ಧರು, ವಿಧವೆಯರು ಸರ್ಕಾರದ ಪಿಂಚಣಿ, ಮಾಸಾಶನಗಳನ್ನೇ ಅವಲಂಬಿಸಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಇವರ ಕಷ್ಟವನ್ನು ಅರ್ಥ ಮಾಡಿಕೊಂಡು ಹಣವನ್ನು ಶೀಘ್ರ ಬಿಡುಗಡೆ ಮಾಡಬೇಕು. ಜೆಡಿಎಸ್ ಅಧಿಕಾರಕ್ಕೆ ಬಂದರೆ ಪಿಂಚಣಿಯನ್ನು ಹೆಚ್ಚಿಸುವುದಾಗಿ ಕುಮಾರಸ್ವಾಮಿ ಅವರು ಚುನಾವಣೆಗೂ ಮುನ್ನ ಹೇಳಿಕೆ ಕೊಟ್ಟಿದ್ದರು. ಆ ಭರವಸೆಯನ್ನು ಶೀಘ್ರ ಈಡೇರಿಸಬೇಕು ಎಂಬುದು ಪಿಂಚಣಿದಾರರ ಅಪೇಕ್ಷೆಯಾಗಿದೆ.