<p>ಮಳೆಗಾಲ ಶುರುವಾಗಿದೆ. ಆದರೆ ಮುಂಗಾರಿನ ಅಬ್ಬರಕ್ಕೆ ಅವಘಡಗಳು ಸಂಭವಿಸದಂತೆ ಸರ್ಕಾರ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ. ಬಹುಪಾಲು ನಗರಗಳ ರಾಜಕಾಲುವೆ, -ಮುಖ್ಯ ಕಾಲುವೆಗಳು ಒತ್ತುವರಿಯಾಗಿದ್ದು, ಕೆಲವೇ ನಿಮಿಷದ ಮಳೆ ಕೂಡ ತಗ್ಗು ಪ್ರದೇಶದ ನಿವಾಸಿಗಳಲ್ಲಿ ಮಹಾಪೂರದ ಭೀತಿ ಮೂಡಿಸುತ್ತಿದೆ. ಕಟ್ಟಿಕೊಂಡಿರುವ ಒಳಚರಂಡಿಗಳನ್ನು ಸ್ವಚ್ಛಗೊಳಿಸಿ, ಕಾಲುವೆಗಳ ದುರಸ್ತಿ ಮಾಡಿಸುವ ಮೂಲಕ ಇದರ ತೀವ್ರತೆ ತಗ್ಗಿಸಲು ಸಾಧ್ಯ. <br /> <br /> ಮಳೆ ನೀರಿನೊಂದಿಗೆ ಚರಂಡಿ ನೀರು, ಕಾರ್ಖಾನೆಗಳ ತ್ಯಾಜ್ಯ ಜಲಮೂಲಗಳನ್ನು ಸೇರುವುದರಿಂದ ನೀರು ಕಲುಷಿತಗೊಂಡು ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆಗಳಿವೆ. ಕುಡಿಯುವ ನೀರು ಸಂಗ್ರಹಾಗಾರಗಳಲ್ಲಿ ಕ್ಲೊರಿನೀಕರಣದೊಂದಿಗೆ ವ್ಯವಸ್ಥಿತ ರೀತಿಯಲ್ಲಿ ನೀರಿನ ಶುದ್ಧೀಕರಣವಾಗಬೇಕು.<br /> <br /> ಸೊಳ್ಳೆ-ನೊಣಗಳ ನಿವಾರಣೆಗೆ ಕ್ರಮ ಜರುಗಿಸಬೇಕು. ಸಂತೆ-ಜಾತ್ರೆಗಳು ನಡೆಯುವ ಸ್ಥಳಗಳಲ್ಲಿ ಮಾರುವ ತಿಂಡಿ,- ಪಾನೀಯಗಳ ಗುಣಮಟ್ಟದ ಮೇಲೆ ನಿಗಾ ವಹಿಸಬೇಕು. ಜನರಲ್ಲಿ ಜಾಗೃತಿ ಮೂಡಿಸಬೇಕು.<br /> <br /> <strong>–ಡಾ.ಸಮೀರ ಎಲ್.ಹಾದಿಮನಿ<br /> ಆಲಮೇಲ (ಸಿಂದಗಿ)</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಳೆಗಾಲ ಶುರುವಾಗಿದೆ. ಆದರೆ ಮುಂಗಾರಿನ ಅಬ್ಬರಕ್ಕೆ ಅವಘಡಗಳು ಸಂಭವಿಸದಂತೆ ಸರ್ಕಾರ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ. ಬಹುಪಾಲು ನಗರಗಳ ರಾಜಕಾಲುವೆ, -ಮುಖ್ಯ ಕಾಲುವೆಗಳು ಒತ್ತುವರಿಯಾಗಿದ್ದು, ಕೆಲವೇ ನಿಮಿಷದ ಮಳೆ ಕೂಡ ತಗ್ಗು ಪ್ರದೇಶದ ನಿವಾಸಿಗಳಲ್ಲಿ ಮಹಾಪೂರದ ಭೀತಿ ಮೂಡಿಸುತ್ತಿದೆ. ಕಟ್ಟಿಕೊಂಡಿರುವ ಒಳಚರಂಡಿಗಳನ್ನು ಸ್ವಚ್ಛಗೊಳಿಸಿ, ಕಾಲುವೆಗಳ ದುರಸ್ತಿ ಮಾಡಿಸುವ ಮೂಲಕ ಇದರ ತೀವ್ರತೆ ತಗ್ಗಿಸಲು ಸಾಧ್ಯ. <br /> <br /> ಮಳೆ ನೀರಿನೊಂದಿಗೆ ಚರಂಡಿ ನೀರು, ಕಾರ್ಖಾನೆಗಳ ತ್ಯಾಜ್ಯ ಜಲಮೂಲಗಳನ್ನು ಸೇರುವುದರಿಂದ ನೀರು ಕಲುಷಿತಗೊಂಡು ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆಗಳಿವೆ. ಕುಡಿಯುವ ನೀರು ಸಂಗ್ರಹಾಗಾರಗಳಲ್ಲಿ ಕ್ಲೊರಿನೀಕರಣದೊಂದಿಗೆ ವ್ಯವಸ್ಥಿತ ರೀತಿಯಲ್ಲಿ ನೀರಿನ ಶುದ್ಧೀಕರಣವಾಗಬೇಕು.<br /> <br /> ಸೊಳ್ಳೆ-ನೊಣಗಳ ನಿವಾರಣೆಗೆ ಕ್ರಮ ಜರುಗಿಸಬೇಕು. ಸಂತೆ-ಜಾತ್ರೆಗಳು ನಡೆಯುವ ಸ್ಥಳಗಳಲ್ಲಿ ಮಾರುವ ತಿಂಡಿ,- ಪಾನೀಯಗಳ ಗುಣಮಟ್ಟದ ಮೇಲೆ ನಿಗಾ ವಹಿಸಬೇಕು. ಜನರಲ್ಲಿ ಜಾಗೃತಿ ಮೂಡಿಸಬೇಕು.<br /> <br /> <strong>–ಡಾ.ಸಮೀರ ಎಲ್.ಹಾದಿಮನಿ<br /> ಆಲಮೇಲ (ಸಿಂದಗಿ)</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>