<p>ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಸಮೀಪವೇ ಬಿ.ಎಂ.ಟಿ.ಸಿ ಬಸ್ ನಿಲ್ದಾಣ ಇದೆ. ಬೇರೆಡೆಯಿಂದ ಬರುವವರು ನಗರದ ವಿವಿಧ ಬಡಾವಣೆಗಳನ್ನು ಸುಲಭವಾಗಿ ತಲುಪಲು ಇದರಿಂದ ಅನುಕೂಲ.<br /> <br /> ಸುಮಾರು 500 ಮೀಟರ್ ಉದ್ದದ ಚಾವಣಿ ಇಲ್ಲದ ಮೇಲ್ಸೇತುವೆ ಎರಡೂ ನಿಲ್ದಾಣಗಳ ನಡುವೆ ಸಂಪರ್ಕ ಕಲ್ಪಿಸುತ್ತದೆ. ಆದರೆ, ಬಿಸಿಲು, ಮಳೆಯಿಂದ ಪ್ರಯಾಣಿಕರಿಗೆ ರಕ್ಷಣೆ ಇಲ್ಲದ ಕಾರಣ ಜನರು ರಸ್ತೆಯ ಮೇಲೆಯೇ ನಡೆದು ಹೋಗುತ್ತಿದ್ದಾರೆ.<br /> <br /> 2015ರ ನವೆಂಬರ್ ತಿಂಗಳಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬರು ರಸ್ತೆ ದಾಟುವಾಗ ಬಸ್ ಹರಿದು ಮೃತಪಟ್ಟರು. ನಂತರ ಸಾರಿಗೆ ನಿಗಮದ ಸಿಬ್ಬಂದಿ ಪ್ರಯಾಣಿಕರಿಗೆ ಮೇಲ್ಸೇತುವೆ ಬಳಸಲು ಒತ್ತಡ ಹೇರುತ್ತಿದ್ದಾರೆ. ಆದರೆ ಮೇಲ್ಸೇತುವೆಗೆ ಚಾವಣಿ ನಿರ್ಮಿಸಲು ಕ್ರಮ ಕೈಗೊಳ್ಳುತ್ತಿಲ್ಲ.<br /> <br /> ಮೇಲ್ಸೇತುವೆ ಮೇಲೆ ಕನಿಷ್ಠ ಪ್ಲಾಸ್ಟಿಕ್ ಶೀಟ್ ಹಾಕಿದರೂ ಜನರಿಗೆ ಅನುಕೂಲವಾಗುತ್ತದೆ. ಚಾವಣಿಗೆ ಸೌರ ಫಲಕ ಅಳವಡಿಸಿದರೆ ವಿದ್ಯುತ್ ಉತ್ಪಾದನೆಯೂ ಸಾಧ್ಯ.<br /> ಕೆ.ಎಸ್.ಆರ್.ಟಿ.ಸಿ ಮತ್ತು ಬಿ.ಎಂ.ಟಿ.ಸಿ.ಯ ಹಿರಿಯ ಅಧಿಕಾರಿಗಳು ಶೀಘ್ರ ಇತ್ತ ಗಮನ ಹರಿಸಬೇಕು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಸಮೀಪವೇ ಬಿ.ಎಂ.ಟಿ.ಸಿ ಬಸ್ ನಿಲ್ದಾಣ ಇದೆ. ಬೇರೆಡೆಯಿಂದ ಬರುವವರು ನಗರದ ವಿವಿಧ ಬಡಾವಣೆಗಳನ್ನು ಸುಲಭವಾಗಿ ತಲುಪಲು ಇದರಿಂದ ಅನುಕೂಲ.<br /> <br /> ಸುಮಾರು 500 ಮೀಟರ್ ಉದ್ದದ ಚಾವಣಿ ಇಲ್ಲದ ಮೇಲ್ಸೇತುವೆ ಎರಡೂ ನಿಲ್ದಾಣಗಳ ನಡುವೆ ಸಂಪರ್ಕ ಕಲ್ಪಿಸುತ್ತದೆ. ಆದರೆ, ಬಿಸಿಲು, ಮಳೆಯಿಂದ ಪ್ರಯಾಣಿಕರಿಗೆ ರಕ್ಷಣೆ ಇಲ್ಲದ ಕಾರಣ ಜನರು ರಸ್ತೆಯ ಮೇಲೆಯೇ ನಡೆದು ಹೋಗುತ್ತಿದ್ದಾರೆ.<br /> <br /> 2015ರ ನವೆಂಬರ್ ತಿಂಗಳಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬರು ರಸ್ತೆ ದಾಟುವಾಗ ಬಸ್ ಹರಿದು ಮೃತಪಟ್ಟರು. ನಂತರ ಸಾರಿಗೆ ನಿಗಮದ ಸಿಬ್ಬಂದಿ ಪ್ರಯಾಣಿಕರಿಗೆ ಮೇಲ್ಸೇತುವೆ ಬಳಸಲು ಒತ್ತಡ ಹೇರುತ್ತಿದ್ದಾರೆ. ಆದರೆ ಮೇಲ್ಸೇತುವೆಗೆ ಚಾವಣಿ ನಿರ್ಮಿಸಲು ಕ್ರಮ ಕೈಗೊಳ್ಳುತ್ತಿಲ್ಲ.<br /> <br /> ಮೇಲ್ಸೇತುವೆ ಮೇಲೆ ಕನಿಷ್ಠ ಪ್ಲಾಸ್ಟಿಕ್ ಶೀಟ್ ಹಾಕಿದರೂ ಜನರಿಗೆ ಅನುಕೂಲವಾಗುತ್ತದೆ. ಚಾವಣಿಗೆ ಸೌರ ಫಲಕ ಅಳವಡಿಸಿದರೆ ವಿದ್ಯುತ್ ಉತ್ಪಾದನೆಯೂ ಸಾಧ್ಯ.<br /> ಕೆ.ಎಸ್.ಆರ್.ಟಿ.ಸಿ ಮತ್ತು ಬಿ.ಎಂ.ಟಿ.ಸಿ.ಯ ಹಿರಿಯ ಅಧಿಕಾರಿಗಳು ಶೀಘ್ರ ಇತ್ತ ಗಮನ ಹರಿಸಬೇಕು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>