‘ವಿಧಾನಸೌಧದಲ್ಲಿ ಭ್ರಷ್ಟಾಚಾರ ನನ್ನ ಕಣ್ಣಿಗೆ ಬಿದ್ದಿಲ್ಲ’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದು ವರದಿಯಾಗಿದೆ. ಅವರು ಮುಖ್ಯಮಂತ್ರಿಯಾಗಿದ್ದಾಗ ಅವರ ಮಂತ್ರಿಮಂಡಲದಲ್ಲಿದ್ದ, ಮತ್ತು ಈಗಲೂ ಮಂತ್ರಿಯಾಗಿರುವ ಕೃಷ್ಣ ಬೈರೇಗೌಡರು, ‘ಯಾರೂ 24 ಕ್ಯಾರಟ್ ಅಪರಂಜಿಗಳಲ್ಲ, ಎಲ್ಲರೂ ಒಂದಲ್ಲ ಒಂದು ರೀತಿಯಲ್ಲಿ ಭ್ರಷ್ಟಾಚಾರಿಗಳೇ’ ಎಂದಿದ್ದೂ ವರದಿಯಾಗಿದೆ.