<p>ರಾಜರಾಜೇಶ್ವರಿ ನಗರದಿಂದ ಹೊಸಕೆರೆಹಳ್ಳಿ ವ್ಯಾಪ್ತಿಯ ರಿಂಗ್ ರಸ್ತೆಗೆ ಸಂಪರ್ಕ ಕಲ್ಪಿಸಬೇಕಾದ 60 ಅಡಿ ರಸ್ತೆ ಬಂಗಾರಪ್ಪನ ನಗರಕ್ಕೆ ಬಂದು, ಅಲ್ಲೇ ನಿಂತುಹೋಗಿ ಎರಡು ವರ್ಷಗಳೇ ಕಳೆದಿವೆ.<br /> <br /> ಕೃಷ್ಣಪ್ಪ ಲೇಔಟ್ನಿಂದ ಕೆರೆಕೋಡಿ, ಡಿಸೋಜನಗರ ಮೂಲಕ ವೀರಭದ್ರನಗರದಲ್ಲಿ ರಿಂಗ್ ರಸ್ತೆಗೆ ಕೂಡಿಕೊಳ್ಳುವ ರಸ್ತೆ ಅತ್ಯಂತ ಕಿರಿದಾಗಿದ್ದು, ಹೆಚ್ಚಿನ ಸಂಖ್ಯೆಯ ವಾಹನಗಳು ಅಲ್ಲಿ ಸಂಚರಿಸುವುದರಿಂದ ಪದೇ ಪದೇ ಅಪಘಾತಗಳು ಸಂಭವಿಸುತ್ತಿವೆ. ಟ್ರಾಫಿಕ್ ಜಾಮ್ ನಿತ್ಯದ ಗೋಳಾಗಿದೆ. ಈ ರಸ್ತೆಯ ಎರಡೂ ಬದಿಗಳಲ್ಲಿ ವರ್ಕ್ಶಾಪ್, ವೈನ್ಶಾಪ್, ಮಾಂಸದಂಗಡಿ, ಬೇಕರಿ ಇತ್ಯಾದಿ ಅನಧಿಕೃತವಾಗಿ ತಲೆಯೆತ್ತಿದ್ದರೂ ಟ್ಯಾಕ್ಸಿ ಮತ್ತು ದ್ವಿಚಕ್ರ ವಾಹನಗಳನ್ನು ಅಡ್ಡಾದಿಡ್ಡಿಯಾಗಿ ನಿಲ್ಲಿಸುತ್ತಿದ್ದರೂ ಬಿಬಿಎಂಪಿ ಅಧಿಕಾರಿಗಳಾಗಲಿ, ಪೊಲೀಸರಾಗಲಿ ಕ್ರಮ ಕೈಗೊಂಡಿಲ್ಲ.<br /> <br /> ಸಂಬಂಧಿಸಿದವರು ಈ ರಸ್ತೆಯನ್ನು ಅಗಲಗೊಳಿಸಲು ಕೂಡಲೆ ಕ್ರಮ ಕೈಗೊಂಡು ವಾಹನಗಳ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿ, ವಾಹನ ಸವಾರರಿಗೆ ಮತ್ತು ಪ್ರಯಾಣಿಕರಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸಬೇಕಾಗಿ ವಿನಂತಿ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಜರಾಜೇಶ್ವರಿ ನಗರದಿಂದ ಹೊಸಕೆರೆಹಳ್ಳಿ ವ್ಯಾಪ್ತಿಯ ರಿಂಗ್ ರಸ್ತೆಗೆ ಸಂಪರ್ಕ ಕಲ್ಪಿಸಬೇಕಾದ 60 ಅಡಿ ರಸ್ತೆ ಬಂಗಾರಪ್ಪನ ನಗರಕ್ಕೆ ಬಂದು, ಅಲ್ಲೇ ನಿಂತುಹೋಗಿ ಎರಡು ವರ್ಷಗಳೇ ಕಳೆದಿವೆ.<br /> <br /> ಕೃಷ್ಣಪ್ಪ ಲೇಔಟ್ನಿಂದ ಕೆರೆಕೋಡಿ, ಡಿಸೋಜನಗರ ಮೂಲಕ ವೀರಭದ್ರನಗರದಲ್ಲಿ ರಿಂಗ್ ರಸ್ತೆಗೆ ಕೂಡಿಕೊಳ್ಳುವ ರಸ್ತೆ ಅತ್ಯಂತ ಕಿರಿದಾಗಿದ್ದು, ಹೆಚ್ಚಿನ ಸಂಖ್ಯೆಯ ವಾಹನಗಳು ಅಲ್ಲಿ ಸಂಚರಿಸುವುದರಿಂದ ಪದೇ ಪದೇ ಅಪಘಾತಗಳು ಸಂಭವಿಸುತ್ತಿವೆ. ಟ್ರಾಫಿಕ್ ಜಾಮ್ ನಿತ್ಯದ ಗೋಳಾಗಿದೆ. ಈ ರಸ್ತೆಯ ಎರಡೂ ಬದಿಗಳಲ್ಲಿ ವರ್ಕ್ಶಾಪ್, ವೈನ್ಶಾಪ್, ಮಾಂಸದಂಗಡಿ, ಬೇಕರಿ ಇತ್ಯಾದಿ ಅನಧಿಕೃತವಾಗಿ ತಲೆಯೆತ್ತಿದ್ದರೂ ಟ್ಯಾಕ್ಸಿ ಮತ್ತು ದ್ವಿಚಕ್ರ ವಾಹನಗಳನ್ನು ಅಡ್ಡಾದಿಡ್ಡಿಯಾಗಿ ನಿಲ್ಲಿಸುತ್ತಿದ್ದರೂ ಬಿಬಿಎಂಪಿ ಅಧಿಕಾರಿಗಳಾಗಲಿ, ಪೊಲೀಸರಾಗಲಿ ಕ್ರಮ ಕೈಗೊಂಡಿಲ್ಲ.<br /> <br /> ಸಂಬಂಧಿಸಿದವರು ಈ ರಸ್ತೆಯನ್ನು ಅಗಲಗೊಳಿಸಲು ಕೂಡಲೆ ಕ್ರಮ ಕೈಗೊಂಡು ವಾಹನಗಳ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿ, ವಾಹನ ಸವಾರರಿಗೆ ಮತ್ತು ಪ್ರಯಾಣಿಕರಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸಬೇಕಾಗಿ ವಿನಂತಿ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>