<p>ಮಾಗಡಿ ಮುಖ್ಯರಸ್ತೆಯ ಹೇರೋಹಳ್ಳಿ ವಾರ್ಡ್ನ ತುಂಗಾನಗರ ರಸ್ತೆಯ ಬದಿಯಲ್ಲಿ ಬಿಬಿಎಂಪಿ ತ್ಯಾಜ್ಯ ಎತ್ತುವ ಐದು ಟಿಪ್ಪರ್ಗಳು ಅನಾಥವಾಗಿ ಬಿದ್ದುಕೊಂಡಿವೆ. ಬಿಬಿಎಂಪಿ ಮನೆಮನೆಯಿಂದ ಹಸಿ ಮತ್ತು ಒಣತ್ಯಾಜ್ಯ ಸಂಗ್ರಹಿಸುವ ಯೋಜನೆ ಹಮ್ಮಿಕೊಂಡ ನಂತರ ಈ ವಾಹನಗಳನ್ನು ರಸ್ತೆಯ ಬದಿಯಲ್ಲಿ ಹೀಗೆ ನಿಲ್ಲಿಸಲಾಗಿದೆ.<br /> <br /> ಬಿಬಿಎಂಪಿ ನಷ್ಟದಲ್ಲಿದೆ ಎಂದು ಹೇಳುತ್ತಾ ಲಕ್ಷಾಂತರ ರೂಪಾಯಿ ಬೆಲೆಬಾಳುವ ಇಂತಹ ವಾಹನಗಳನ್ನು ಬಳಸದೇ ಮೂಲೆಗೆ ಎಸೆದರೆ ಆಗುವ ನಷ್ಟ ಕಡಿಮೆಯೇ? ಸಾರ್ವಜನಿಕ ಹಣವನ್ನು ಈ ರೀತಿ ಪೋಲು ಮಾಡುವ ಬದಲು ಸಮರ್ಪಕವಾಗಿ ಬಳಸಬೇಕು. ಅಲ್ಲದೆ ವಾಹನವನ್ನು ರಸ್ತೆ ಬದಿ ನಿಲ್ಲಿಸುವುದರಿಂದ ವಾಹನ ಸವಾರರಿಗೂ, ಪಾದಚಾರಿಗಳಿಗೂ ತೊಂದರೆಯಾಗುತ್ತಿದೆ. ಈ ರಸ್ತೆಯಲ್ಲಿ ಕಾವೇರಿ ಪೈಪ್ಲೈನ್ ಅಳವಡಿಸುವ ಕಾರ್ಯ ನಡೆಯುತ್ತಿದ್ದು, ಅದಕ್ಕೂ ಅಡಚಣೆಯಾಗುತ್ತಿದೆ. ಈಗಾಗಲೇ ಅರ್ಧ ವಾಹನ ಮಣ್ಣಿನಲ್ಲಿ ಹೂತು ಹೋಗಿದೆ.<br /> <br /> ಇದರಿಂದ ವಾಹನ ಇನ್ನಷ್ಟು ಶಿಥಿಲಗೊಳ್ಳುವ ಸಾಧ್ಯತೆ ಇದೆ. ಟಿಪ್ಪರ್ ಸಂಪೂರ್ಣವಾಗಿ ಮಣ್ಣು ಪಾಲಾಗುವ ಮುನ್ನವೇ ಇಲ್ಲಿಂದ ತೆರವುಗೊಳಿಸುವಂತೆ ಪಾಲಿಕೆಯ ಅಧಿಕಾರಿಗಳಲ್ಲಿ ಮನವಿ ಮಾಡುತ್ತಿದ್ದೇನೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಾಗಡಿ ಮುಖ್ಯರಸ್ತೆಯ ಹೇರೋಹಳ್ಳಿ ವಾರ್ಡ್ನ ತುಂಗಾನಗರ ರಸ್ತೆಯ ಬದಿಯಲ್ಲಿ ಬಿಬಿಎಂಪಿ ತ್ಯಾಜ್ಯ ಎತ್ತುವ ಐದು ಟಿಪ್ಪರ್ಗಳು ಅನಾಥವಾಗಿ ಬಿದ್ದುಕೊಂಡಿವೆ. ಬಿಬಿಎಂಪಿ ಮನೆಮನೆಯಿಂದ ಹಸಿ ಮತ್ತು ಒಣತ್ಯಾಜ್ಯ ಸಂಗ್ರಹಿಸುವ ಯೋಜನೆ ಹಮ್ಮಿಕೊಂಡ ನಂತರ ಈ ವಾಹನಗಳನ್ನು ರಸ್ತೆಯ ಬದಿಯಲ್ಲಿ ಹೀಗೆ ನಿಲ್ಲಿಸಲಾಗಿದೆ.<br /> <br /> ಬಿಬಿಎಂಪಿ ನಷ್ಟದಲ್ಲಿದೆ ಎಂದು ಹೇಳುತ್ತಾ ಲಕ್ಷಾಂತರ ರೂಪಾಯಿ ಬೆಲೆಬಾಳುವ ಇಂತಹ ವಾಹನಗಳನ್ನು ಬಳಸದೇ ಮೂಲೆಗೆ ಎಸೆದರೆ ಆಗುವ ನಷ್ಟ ಕಡಿಮೆಯೇ? ಸಾರ್ವಜನಿಕ ಹಣವನ್ನು ಈ ರೀತಿ ಪೋಲು ಮಾಡುವ ಬದಲು ಸಮರ್ಪಕವಾಗಿ ಬಳಸಬೇಕು. ಅಲ್ಲದೆ ವಾಹನವನ್ನು ರಸ್ತೆ ಬದಿ ನಿಲ್ಲಿಸುವುದರಿಂದ ವಾಹನ ಸವಾರರಿಗೂ, ಪಾದಚಾರಿಗಳಿಗೂ ತೊಂದರೆಯಾಗುತ್ತಿದೆ. ಈ ರಸ್ತೆಯಲ್ಲಿ ಕಾವೇರಿ ಪೈಪ್ಲೈನ್ ಅಳವಡಿಸುವ ಕಾರ್ಯ ನಡೆಯುತ್ತಿದ್ದು, ಅದಕ್ಕೂ ಅಡಚಣೆಯಾಗುತ್ತಿದೆ. ಈಗಾಗಲೇ ಅರ್ಧ ವಾಹನ ಮಣ್ಣಿನಲ್ಲಿ ಹೂತು ಹೋಗಿದೆ.<br /> <br /> ಇದರಿಂದ ವಾಹನ ಇನ್ನಷ್ಟು ಶಿಥಿಲಗೊಳ್ಳುವ ಸಾಧ್ಯತೆ ಇದೆ. ಟಿಪ್ಪರ್ ಸಂಪೂರ್ಣವಾಗಿ ಮಣ್ಣು ಪಾಲಾಗುವ ಮುನ್ನವೇ ಇಲ್ಲಿಂದ ತೆರವುಗೊಳಿಸುವಂತೆ ಪಾಲಿಕೆಯ ಅಧಿಕಾರಿಗಳಲ್ಲಿ ಮನವಿ ಮಾಡುತ್ತಿದ್ದೇನೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>