<p>ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಹನ್ನೆರಡು ಸಾವಿರ ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಿಕ್ಷಣ ಇಲಾಖೆಯ ಆಯುಕ್ತರು ಇತ್ತೀಚೆಗೆ `ಪ್ರಜಾವಾಣಿ'ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ. ಕಾಲಕಾಲಕ್ಕೆ ಅಗತ್ಯವಿರುವ ಶಿಕ್ಷಕರನ್ನು ತುಂಬದಿರುವ ಕಾರಣದಿಂದ ಇಂದು ಖಾಲಿ ಹುದ್ದೆಗಳ ಸಂಖ್ಯೆ ಹೆಚ್ಚಾಗಿದೆ.<br /> <br /> ಸರ್ಕಾರದ ಈ ಧೋರಣೆಯಿಂದ ಶಿಕ್ಷಕರಿಲ್ಲದೇ ವಿದ್ಯಾರ್ಥಿಗಳಿಗೆ ಹಿನ್ನೆಡೆ. ಮತ್ತೊಂದೆಡೆ ಶಿಕ್ಷಕ ಹುದ್ದೆಯನ್ನು ಚಾತಕ ಪಕ್ಷಗಳಂತೆ ಕಾಯುತ್ತಿರುವ ಲಕ್ಷಾಂತರ ಡಿ.ಎಡ್. ಪದವೀಧರರು.<br /> <br /> ಕಳೆದ ಚುನಾವಣೆ ಸಮಯದಲ್ಲಿ ಶಿಕ್ಷಕ ಹುದ್ದೆಗೆ ಅರ್ಜಿ ಕರೆದಿದ್ದು ಅದೀಗ ಕಾರಣಾಂತರಗಳಿಂದ ಕೋಮಾ ಸ್ಥಿತಿ ತಲುಪಿದೆ. ಜನತಾ ಪಕ್ಷ ಸರ್ಕಾರ ಇದ್ದಾಗ ಅಂದಿನ ಶಿಕ್ಷಣ ಸಚಿವ ಎಚ್.ಜಿ. ಗೋವಿಂದೇಗೌಡರು ರಾಜ್ಯದಲ್ಲಿ ಅಗತ್ಯವಿರುವ ಶಿಕ್ಷಕ ಹುದ್ದೆಗಳನ್ನು ತುಂಬಿ ಶಿಕ್ಷಣ ಕ್ರಾಂತಿಯನ್ನೆ ಮಾಡಿದ್ದರು. ಗೋವಿಂದೇಗೌಡರ ಕಾಲದ ಪ್ರತಿ ನೇಮಕದಲ್ಲೂ ವಯೋಮಿತಿ ಮೀರುತ್ತಿರುವ ಅಭ್ಯರ್ಥಿಗಳಿಗೆ ಮೀಸಲಾತಿ ನೀಡಿ ವಯಸ್ಸಾಗಿರುವ ಅಭ್ಯರ್ಥಿಗಳಿಗೆ ಅವಕಾಶ ನೀಡಿದ್ದರು.<br /> <br /> ಈ ಮಾನವೀಯ ನಿಯಮವನ್ನು ಮುಂದಿನ ಸರ್ಕಾರಗಳು ಗಾಳಿಗೆ ತೂರಿದ ಪರಿಣಾಮ ಇಂದು ಲಕ್ಷಾಂತರ ನಿರುದ್ಯೋಗಿ ಶಿಕ್ಷಕರು ಕೆಲಸ ಸಿಗದೆ ತಮ್ಮ ವಯೋಮಿತಿಯನ್ನು ಮೀರಿ ಕೆಲಸದಿಂದ ವಂಚಿತರಾಗುತ್ತಿದ್ದಾರೆ.<br /> <br /> ಕಳೆದ ಹತ್ತು ವರ್ಷಗಳಿಂದಲೂ ವಯೋಮಿತಿ ಮೀರುತ್ತಿರುವ ಅಭ್ಯರ್ಥಿಗಳಿಗೆ ನೇಮಕ ನಡೆಯದೇ ಇರುವ ಕಾರಣ, ಇಂದು ಅದೆಷ್ಟೋ ಅಭ್ಯರ್ಥಿಗಳು ಶಿಕ್ಷಕ ಹುದ್ದೆ ದೊರೆಯದೆ ಹತಾಶರಾಗಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಹನ್ನೆರಡು ಸಾವಿರ ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಿಕ್ಷಣ ಇಲಾಖೆಯ ಆಯುಕ್ತರು ಇತ್ತೀಚೆಗೆ `ಪ್ರಜಾವಾಣಿ'ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ. ಕಾಲಕಾಲಕ್ಕೆ ಅಗತ್ಯವಿರುವ ಶಿಕ್ಷಕರನ್ನು ತುಂಬದಿರುವ ಕಾರಣದಿಂದ ಇಂದು ಖಾಲಿ ಹುದ್ದೆಗಳ ಸಂಖ್ಯೆ ಹೆಚ್ಚಾಗಿದೆ.<br /> <br /> ಸರ್ಕಾರದ ಈ ಧೋರಣೆಯಿಂದ ಶಿಕ್ಷಕರಿಲ್ಲದೇ ವಿದ್ಯಾರ್ಥಿಗಳಿಗೆ ಹಿನ್ನೆಡೆ. ಮತ್ತೊಂದೆಡೆ ಶಿಕ್ಷಕ ಹುದ್ದೆಯನ್ನು ಚಾತಕ ಪಕ್ಷಗಳಂತೆ ಕಾಯುತ್ತಿರುವ ಲಕ್ಷಾಂತರ ಡಿ.ಎಡ್. ಪದವೀಧರರು.<br /> <br /> ಕಳೆದ ಚುನಾವಣೆ ಸಮಯದಲ್ಲಿ ಶಿಕ್ಷಕ ಹುದ್ದೆಗೆ ಅರ್ಜಿ ಕರೆದಿದ್ದು ಅದೀಗ ಕಾರಣಾಂತರಗಳಿಂದ ಕೋಮಾ ಸ್ಥಿತಿ ತಲುಪಿದೆ. ಜನತಾ ಪಕ್ಷ ಸರ್ಕಾರ ಇದ್ದಾಗ ಅಂದಿನ ಶಿಕ್ಷಣ ಸಚಿವ ಎಚ್.ಜಿ. ಗೋವಿಂದೇಗೌಡರು ರಾಜ್ಯದಲ್ಲಿ ಅಗತ್ಯವಿರುವ ಶಿಕ್ಷಕ ಹುದ್ದೆಗಳನ್ನು ತುಂಬಿ ಶಿಕ್ಷಣ ಕ್ರಾಂತಿಯನ್ನೆ ಮಾಡಿದ್ದರು. ಗೋವಿಂದೇಗೌಡರ ಕಾಲದ ಪ್ರತಿ ನೇಮಕದಲ್ಲೂ ವಯೋಮಿತಿ ಮೀರುತ್ತಿರುವ ಅಭ್ಯರ್ಥಿಗಳಿಗೆ ಮೀಸಲಾತಿ ನೀಡಿ ವಯಸ್ಸಾಗಿರುವ ಅಭ್ಯರ್ಥಿಗಳಿಗೆ ಅವಕಾಶ ನೀಡಿದ್ದರು.<br /> <br /> ಈ ಮಾನವೀಯ ನಿಯಮವನ್ನು ಮುಂದಿನ ಸರ್ಕಾರಗಳು ಗಾಳಿಗೆ ತೂರಿದ ಪರಿಣಾಮ ಇಂದು ಲಕ್ಷಾಂತರ ನಿರುದ್ಯೋಗಿ ಶಿಕ್ಷಕರು ಕೆಲಸ ಸಿಗದೆ ತಮ್ಮ ವಯೋಮಿತಿಯನ್ನು ಮೀರಿ ಕೆಲಸದಿಂದ ವಂಚಿತರಾಗುತ್ತಿದ್ದಾರೆ.<br /> <br /> ಕಳೆದ ಹತ್ತು ವರ್ಷಗಳಿಂದಲೂ ವಯೋಮಿತಿ ಮೀರುತ್ತಿರುವ ಅಭ್ಯರ್ಥಿಗಳಿಗೆ ನೇಮಕ ನಡೆಯದೇ ಇರುವ ಕಾರಣ, ಇಂದು ಅದೆಷ್ಟೋ ಅಭ್ಯರ್ಥಿಗಳು ಶಿಕ್ಷಕ ಹುದ್ದೆ ದೊರೆಯದೆ ಹತಾಶರಾಗಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>