ಇಂದಿರಾ ಗಾಂಧಿ ಹಂತಕರನ್ನು ‘ಹುತಾತ್ಮರು’ ಎಂದು ವೈಭವೀಕರಿಸಿ, ಅವರ ಕುಟುಂಬದವರನ್ನು ಸನ್ಮಾನಿಸಿರುವ ವಿಷಯ ತಿಳಿದು ನೋವಾಯಿತು. ಸಿಖ್ ವಿದ್ಯಾರ್ಥಿಗಳ ಒಕ್ಕೂಟದ ಆಶ್ರಯದಲ್ಲಿ, ಗುರುದ್ವಾರವೊಂದರಲ್ಲಿ ಅಕಾಲಿದಳದ ಹಿರಿಯರ ಸಮ್ಮುಖದಲ್ಲಿ ಈ ಸನ್ಮಾನ ನಡೆದಿರುವುದು ವಿಷಾದದ ಸಂಗತಿ.
ಹಿಂಸೆಯ, ಕೊಲೆಯ ವೈಭವೀಕರಣ ಸಲ್ಲದು. ಹಿಂಸೆ ಯಾವುದೇ ಸಮಸ್ಯೆಗೂ ಪರಿಹಾರವಲ್ಲ. ಯಾವುದೇ ಧರ್ಮಕ್ಕಿಂತ ‘ರಾಷ್ಟ್ರಧರ್ಮ’ ಸಂವಿಧಾನ ದೊಡ್ಡದು. ಯುವಕರು ಧರ್ಮವನ್ನು ಅನುಸರಿಸುತ್ತಲೇ ಸಹಿಷ್ಣುಗಳಾಗಬೇಕಾದುದು ಇಂದಿನ ತುರ್ತು ಅಗತ್ಯ. ಇಂತಹ ‘ಸನ್ಮಾನ’ಗಳು ಸಮಾಜಕ್ಕೆ ಒಳ್ಳೆಯ ಸಂದೇಶವನ್ನು ನೀಡುವುದಿಲ್ಲ.