<p>ಮಕ್ಕಳ ಹಾಜರಾತಿ ಸಂಖ್ಯೆ ಇಳಿಮುಖವಾಗಿರುವುದನ್ನು ಗಮನಿಸಿ, ಶಿಕ್ಷಣಾಧಿಕಾರಿಗಳು ಶಿಕ್ಷಕರ ಹೆಚ್ಚುವರಿ ಪಟ್ಟಿಯನ್ನು ತಯಾರಿಸಿ ಶಿಕ್ಷಕರ ವರ್ಗಾವಣೆ ಕ್ರಮಕ್ಕೆ ಮುಂದಾಗಿದ್ದಾರೆ. ಇದು ಸರ್ಕಾರ ಕೈಗೊಳ್ಳಬೇಕಾದ ಸೂಕ್ತ ಕೆಲಸ. ಯಾಕೆಂದರೆ, ಮಕ್ಕಳೇ ಇಲ್ಲದೆ ಶಾಲೆಗಳಲ್ಲಿ ಹೆಚ್ಚುವರಿ ಶಿಕ್ಷಕರ ಅಗತ್ಯವಾದರೂ ಏನಿದೆ?<br /> <br /> ಆದರೆ, ಇತ್ತೀಚೆಗೆ ಕರ್ನಾಟಕ ರಕ್ಷಣಾ ವೇದಿಕೆಯವರು, ಈ ಪ್ರಕ್ರಿಯೆ ಅವೈಜ್ಞಾನಿಕವಾದದ್ದು, ಇದನ್ನು ತಕ್ಷಣ ಕೈ ಬಿಡಬೇಕೆಂದು ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ. ಶಾಲಾ ಎಸ್ಡಿಎಂಸಿ ಅಧ್ಯಕ್ಷರು ಸಹ ಇಂಥ ಪ್ರತಿಭಟನೆಗಳನ್ನು ಮಾಡಿದ ವರದಿಗಳಿವೆ. ಹೆಚ್ಚುವರಿಯನ್ನು ವಿರೋಧಿಸುವ ಕೆಲವು ಶಿಕ್ಷಕರು, ತಮ್ಮ ವಿದ್ಯಾರ್ಥಿಗಳನ್ನು ಪ್ರತಿಭಟನೆಗೆ ಬಳಸಿಕೊಂಡ ಉದಾಹರಣೆಗಳಿವೆ.<br /> <br /> ಸರ್ಕಾರಿ ಶಾಲೆಗಳೆಂದರೆ ನಗರಸಭೆಯ ಬೀದಿ ದೀಪಗಳೇ? ಅವುಗಳ ಮೇಲೆ ಯಾವಾಗ ಯಾರು ಬೇಕಾದರೂ ಕಲ್ಲೆಸೆಯಬಹುದೇ? ಹೆಚ್ಚುವರಿಯಾಗಿರುವ ಸುದ್ದಿ ತಿಳಿದ ನೂರಾರು ಶಿಕ್ಷಕರು ಶಾಲೆ ಬಿಟ್ಟು ಕ್ಷೇತ್ರಶಿಕ್ಷಣಾಧಿಕಾರಿ ಕಚೇರಿ ಮುಂದೆ ಇಡೀ ದಿನ ರಾಜಕೀಯ ಚಟುವಟಿಕೆಯಲ್ಲಿ ತೊಡಗಿಕೊಂಡದ್ದು ವರದಿಯಾಗಿದೆ.<br /> <br /> ಶಿಕ್ಷಣಾಧಿಕಾರಿಗಳು ದಿಟ್ಟತನದಿಂದ, ನಿಷ್ಠುರ ಹಾಗೂ ನಿರ್ದಾಕ್ಷಿಣ್ಯವಾಗಿ ಯಾವ ಕ್ರಮವನ್ನೂ ಕೈಗೊಳ್ಳದ ಪರಿಸ್ಥಿತಿ ಗಟ್ಟಿಗೊಂಡಿದೆ. ಯಾಕೆಂದರೆ ಇಲ್ಲಿ ರಾಜಕೀಯ ಹಸ್ತಕ್ಷೇಪವೂ ಇದೆ. ಒಟ್ಟಾರೆ, ಸರ್ಕಾರಿ ಶಾಲೆಗಳು ಅಧೋಗತಿಯ ಹಾದಿಯಲ್ಲಿ ಸಾಗುತ್ತಿರುವುದು ಸತ್ಯ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಕ್ಕಳ ಹಾಜರಾತಿ ಸಂಖ್ಯೆ ಇಳಿಮುಖವಾಗಿರುವುದನ್ನು ಗಮನಿಸಿ, ಶಿಕ್ಷಣಾಧಿಕಾರಿಗಳು ಶಿಕ್ಷಕರ ಹೆಚ್ಚುವರಿ ಪಟ್ಟಿಯನ್ನು ತಯಾರಿಸಿ ಶಿಕ್ಷಕರ ವರ್ಗಾವಣೆ ಕ್ರಮಕ್ಕೆ ಮುಂದಾಗಿದ್ದಾರೆ. ಇದು ಸರ್ಕಾರ ಕೈಗೊಳ್ಳಬೇಕಾದ ಸೂಕ್ತ ಕೆಲಸ. ಯಾಕೆಂದರೆ, ಮಕ್ಕಳೇ ಇಲ್ಲದೆ ಶಾಲೆಗಳಲ್ಲಿ ಹೆಚ್ಚುವರಿ ಶಿಕ್ಷಕರ ಅಗತ್ಯವಾದರೂ ಏನಿದೆ?<br /> <br /> ಆದರೆ, ಇತ್ತೀಚೆಗೆ ಕರ್ನಾಟಕ ರಕ್ಷಣಾ ವೇದಿಕೆಯವರು, ಈ ಪ್ರಕ್ರಿಯೆ ಅವೈಜ್ಞಾನಿಕವಾದದ್ದು, ಇದನ್ನು ತಕ್ಷಣ ಕೈ ಬಿಡಬೇಕೆಂದು ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ. ಶಾಲಾ ಎಸ್ಡಿಎಂಸಿ ಅಧ್ಯಕ್ಷರು ಸಹ ಇಂಥ ಪ್ರತಿಭಟನೆಗಳನ್ನು ಮಾಡಿದ ವರದಿಗಳಿವೆ. ಹೆಚ್ಚುವರಿಯನ್ನು ವಿರೋಧಿಸುವ ಕೆಲವು ಶಿಕ್ಷಕರು, ತಮ್ಮ ವಿದ್ಯಾರ್ಥಿಗಳನ್ನು ಪ್ರತಿಭಟನೆಗೆ ಬಳಸಿಕೊಂಡ ಉದಾಹರಣೆಗಳಿವೆ.<br /> <br /> ಸರ್ಕಾರಿ ಶಾಲೆಗಳೆಂದರೆ ನಗರಸಭೆಯ ಬೀದಿ ದೀಪಗಳೇ? ಅವುಗಳ ಮೇಲೆ ಯಾವಾಗ ಯಾರು ಬೇಕಾದರೂ ಕಲ್ಲೆಸೆಯಬಹುದೇ? ಹೆಚ್ಚುವರಿಯಾಗಿರುವ ಸುದ್ದಿ ತಿಳಿದ ನೂರಾರು ಶಿಕ್ಷಕರು ಶಾಲೆ ಬಿಟ್ಟು ಕ್ಷೇತ್ರಶಿಕ್ಷಣಾಧಿಕಾರಿ ಕಚೇರಿ ಮುಂದೆ ಇಡೀ ದಿನ ರಾಜಕೀಯ ಚಟುವಟಿಕೆಯಲ್ಲಿ ತೊಡಗಿಕೊಂಡದ್ದು ವರದಿಯಾಗಿದೆ.<br /> <br /> ಶಿಕ್ಷಣಾಧಿಕಾರಿಗಳು ದಿಟ್ಟತನದಿಂದ, ನಿಷ್ಠುರ ಹಾಗೂ ನಿರ್ದಾಕ್ಷಿಣ್ಯವಾಗಿ ಯಾವ ಕ್ರಮವನ್ನೂ ಕೈಗೊಳ್ಳದ ಪರಿಸ್ಥಿತಿ ಗಟ್ಟಿಗೊಂಡಿದೆ. ಯಾಕೆಂದರೆ ಇಲ್ಲಿ ರಾಜಕೀಯ ಹಸ್ತಕ್ಷೇಪವೂ ಇದೆ. ಒಟ್ಟಾರೆ, ಸರ್ಕಾರಿ ಶಾಲೆಗಳು ಅಧೋಗತಿಯ ಹಾದಿಯಲ್ಲಿ ಸಾಗುತ್ತಿರುವುದು ಸತ್ಯ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>