<p>ಪ್ರಾಥಮಿಕ, ಪ್ರೌಢ ಶಾಲೆಗಳ ಶಿಕ್ಷಕರು ಉನ್ನತ ವ್ಯಾಸಂಗಕ್ಕೆ ಹೋಗಲು ಇಲಾಖೆಯ ಅನುಮತಿ ಪಡೆಯಲು ಉಪ ನಿರ್ದೇಶಕರ ಕಚೇರಿಗೆ ಲಿಖಿತ ಮನವಿ ಸಲ್ಲಿಸಬೇಕು ಎಂಬ ನಿಯಮವಿದೆ. ಈ ನಿಯಮದ ಅನ್ವಯ ಗುಲ್ಬರ್ಗಾ ಉಪ ನಿರ್ದೇಶಕರ ಕಚೇರಿಗೆ ದಾಖಲೆಗಳ ಸಮೇತ ಅರ್ಜಿ ಸಲ್ಲಿಸಿದರೂ ಸಂಬಂಧಪಟ್ಟ ಸಿಬ್ಬಂದಿ ಸ್ಪಂದಿಸುತ್ತಿಲ್ಲ.<br /> <br /> ಹೆಚ್ಚು ಒತ್ತಾಯಿಸಿದರೆ ಅರ್ಜಿ ಕಳೆದುಹೋಗಿದೆ. ಇನ್ನೊಮ್ಮೆ ಸಲ್ಲಿಸಿ ಎನ್ನುತ್ತಾರೆ. ಸ್ನಾತಕೋತ್ತರ ಪದವಿ ವ್ಯಾಸಂಗಕ್ಕೆ ಅನುಮತಿ ಕೇಳಿದ ಪ್ರೌಢಶಾಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರನ್ನು ನಿಮ್ಮ `ಪದವಿ~ ಪೂರ್ಣಗೊಂಡಿದೆಯೇ ಎಂಬ ಪ್ರಶ್ನೆ ಕೇಳುತ್ತಾರೆ.<br /> <br /> ಅನುಮತಿ ಪಡೆಯಲು ರಜೆ ಹಾಕಿ ಬಂದು ಹೋಗಲು ತೊಂದರೆಯಾಗುತ್ತದೆ. ಬೇಗ ಪರವಾನಗಿ ಕೊಡಿ ಎಂದು ಒತ್ತಾಯಿಸಿದರೆ ನಿಮ್ಮ ಉನ್ನತ ವ್ಯಾಸಂಗದಿಂದ ಇಲಾಖೆಗೆ ಏನು ಪ್ರಯೋಜನ? ಅನುಮತಿ ಬೇಕಾದರೆ ದುಡ್ಡು (ಲಂಚ) ಕೊಡಿ ಎಂದು ಯಾವ ಹಿಂಜರಿಕೆ ಇಲ್ಲದೆ ಕೇಳುತ್ತಾರೆ.<br /> <br /> ಶಿಕ್ಷಣ ಇಲಾಖೆಗೆ ಬರುವ ಅರ್ಜಿಗಳು, ಕಡತಗಳ ವಿಲೇವಾರಿ ಒಂದು ಕಾಲಮಿತಿಯಲ್ಲಿ ನಡೆಯಬೇಕು ಎಂಬ ನಿಯಮವಿದೆ. ಅರ್ಜಿ ಸಲ್ಲಿಸಿದ ತಮ್ಮದೇ ಇಲಾಖೆಯ ನೌಕರರೊಂದಿಗೆ ಹಣದ ಚೌಕಾಸಿಗೆ ಇಳಿಯುವ ಸಿಬ್ಬಂದಿ ಉಪ ನಿರ್ದೇಶಕರ ಕಚೇರಿಯಲ್ಲಿದ್ದಾರೆ ಎಂಬುದೇ ನಾಚಿಕೆಗೇಡಿನ ಸಂಗತಿ. ಈ ಕುರಿತು ಶಿಕ್ಷಣ ಸಚಿವರು, ಆಯುಕ್ತರು ಗಮನ ಹರಿಸಬೇಕು. ಶಿಕ್ಷಕರ ಶೋಷಣೆ ತಪ್ಪಿಸಬೇಕು ಎಂದು ವಿನಂತಿಸುತ್ತೇವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಾಥಮಿಕ, ಪ್ರೌಢ ಶಾಲೆಗಳ ಶಿಕ್ಷಕರು ಉನ್ನತ ವ್ಯಾಸಂಗಕ್ಕೆ ಹೋಗಲು ಇಲಾಖೆಯ ಅನುಮತಿ ಪಡೆಯಲು ಉಪ ನಿರ್ದೇಶಕರ ಕಚೇರಿಗೆ ಲಿಖಿತ ಮನವಿ ಸಲ್ಲಿಸಬೇಕು ಎಂಬ ನಿಯಮವಿದೆ. ಈ ನಿಯಮದ ಅನ್ವಯ ಗುಲ್ಬರ್ಗಾ ಉಪ ನಿರ್ದೇಶಕರ ಕಚೇರಿಗೆ ದಾಖಲೆಗಳ ಸಮೇತ ಅರ್ಜಿ ಸಲ್ಲಿಸಿದರೂ ಸಂಬಂಧಪಟ್ಟ ಸಿಬ್ಬಂದಿ ಸ್ಪಂದಿಸುತ್ತಿಲ್ಲ.<br /> <br /> ಹೆಚ್ಚು ಒತ್ತಾಯಿಸಿದರೆ ಅರ್ಜಿ ಕಳೆದುಹೋಗಿದೆ. ಇನ್ನೊಮ್ಮೆ ಸಲ್ಲಿಸಿ ಎನ್ನುತ್ತಾರೆ. ಸ್ನಾತಕೋತ್ತರ ಪದವಿ ವ್ಯಾಸಂಗಕ್ಕೆ ಅನುಮತಿ ಕೇಳಿದ ಪ್ರೌಢಶಾಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರನ್ನು ನಿಮ್ಮ `ಪದವಿ~ ಪೂರ್ಣಗೊಂಡಿದೆಯೇ ಎಂಬ ಪ್ರಶ್ನೆ ಕೇಳುತ್ತಾರೆ.<br /> <br /> ಅನುಮತಿ ಪಡೆಯಲು ರಜೆ ಹಾಕಿ ಬಂದು ಹೋಗಲು ತೊಂದರೆಯಾಗುತ್ತದೆ. ಬೇಗ ಪರವಾನಗಿ ಕೊಡಿ ಎಂದು ಒತ್ತಾಯಿಸಿದರೆ ನಿಮ್ಮ ಉನ್ನತ ವ್ಯಾಸಂಗದಿಂದ ಇಲಾಖೆಗೆ ಏನು ಪ್ರಯೋಜನ? ಅನುಮತಿ ಬೇಕಾದರೆ ದುಡ್ಡು (ಲಂಚ) ಕೊಡಿ ಎಂದು ಯಾವ ಹಿಂಜರಿಕೆ ಇಲ್ಲದೆ ಕೇಳುತ್ತಾರೆ.<br /> <br /> ಶಿಕ್ಷಣ ಇಲಾಖೆಗೆ ಬರುವ ಅರ್ಜಿಗಳು, ಕಡತಗಳ ವಿಲೇವಾರಿ ಒಂದು ಕಾಲಮಿತಿಯಲ್ಲಿ ನಡೆಯಬೇಕು ಎಂಬ ನಿಯಮವಿದೆ. ಅರ್ಜಿ ಸಲ್ಲಿಸಿದ ತಮ್ಮದೇ ಇಲಾಖೆಯ ನೌಕರರೊಂದಿಗೆ ಹಣದ ಚೌಕಾಸಿಗೆ ಇಳಿಯುವ ಸಿಬ್ಬಂದಿ ಉಪ ನಿರ್ದೇಶಕರ ಕಚೇರಿಯಲ್ಲಿದ್ದಾರೆ ಎಂಬುದೇ ನಾಚಿಕೆಗೇಡಿನ ಸಂಗತಿ. ಈ ಕುರಿತು ಶಿಕ್ಷಣ ಸಚಿವರು, ಆಯುಕ್ತರು ಗಮನ ಹರಿಸಬೇಕು. ಶಿಕ್ಷಕರ ಶೋಷಣೆ ತಪ್ಪಿಸಬೇಕು ಎಂದು ವಿನಂತಿಸುತ್ತೇವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>