ನಿಷೇಧಿತ ‘ಢುಂಢಿ’ ಕೃತಿಯ ಲೇಖಕ ಯೋಗೇಶ್ ಮಾಸ್ಟರ್ ಅವರ ಮುಖಕ್ಕೆ ಕೆಲ ಕಿಡಿಗೇಡಿಗಳು ಮಸಿ ಬಳಿದು, ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿರುವುದು ಖಂಡನೀಯ. ಇದು ವ್ಯಕ್ತಿಯ ವೈಯಕ್ತಿಕ ಸ್ವಾತಂತ್ರ್ಯಹರಣ ಮಾತ್ರವಲ್ಲ, ಮಾನಸಿಕ ಅಸ್ಥಿರತೆಗೆ ಕಾರಣವಾಗ ಬಹುದಾದ ಸಂಗತಿ.
ಸ್ವಸ್ಥ ಸಮಾಜದ ನಿರ್ಮಾಣಕ್ಕೆ ಇಂತಹ ಕೃತ್ಯ ಗಳು ಮಾರಕ. ಸರ್ಕಾರ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಿ ಎಚ್ಚರಿಕೆಯ ಸಂದೇಶ ರವಾನಿಸಬೇಕು.
-ರಾಧಾ ತೇಜಸ್ವಿ, ಮಂಗಳೂರು