ಹಿಂದೂ ಧರ್ಮಕ್ಕೆ ಕಳಂಕ ಹಚ್ಚಿರುವ ಅಸ್ಪೃಶ್ಯತೆ ಆಚರಣೆಯನ್ನು ನಿರ್ಮೂಲನೆ ಮಾಡುವ ಪ್ರಯತ್ನವಾಗಿ ಶ್ರೀ ವಿಶ್ವೇಶ್ವರತೀರ್ಥ ಸ್ವಾಮೀಜಿ ಮತ್ತು ಮಾದಾರ ಚೆನ್ನಯ್ಯ ಸ್ವಾಮೀಜಿ ಅವರ ಪ್ರಯತ್ನ ಶ್ಲಾಘನೀಯ.
ಈ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ದಲಿತರ ಮನೆಗಳ ಸಹಪಂಕ್ತಿ ಭೋಜನದ ಕಾರ್ಯಕ್ರಮ ನಡೆಸಿದ್ದು ಮೆಚ್ಚಬೇಕಾದ ಕ್ರಮ. ಇದೇ ರೀತಿ ದಲಿತರನ್ನೊಳಗೊಂಡು ಗ್ರಾಮೀಣ ಪ್ರದೇಶಗಳಲ್ಲಿ ಸಹಪಂಕ್ತಿ ಭೋಜನವನ್ನು ಸವರ್ಣೀಯರ ಮನೆಗಳಲ್ಲಿ ಏರ್ಪಡಿಸಿದರೆ ಉದ್ದೇಶ ಸಫಲವಾಗುತ್ತದೆ.