ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ಅಂಗವಾಗಿ ‘ಪ್ರಜಾವಾಣಿ’ಯಲ್ಲಿ ಪ್ರಕಟವಾಗಿದ್ದ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿಗಾಗಿ ಹಾಕಿಕೊಂಡಿರುವ ಯೋಜನೆಗಳಲ್ಲಿ ತಿಳಿಸಿರುವಂತೆ ಕರ್ನಾಟಕ ರಾಜ್ಯದ ಎಲ್ಲಾ ಸಾರಿಗೆ ಬಸ್ಸುಗಳಲ್ಲಿ 60 ವರ್ಷ ಹಾಗೂ ಮೇಲ್ಪಟ್ಟ ವಯೋಮಾನದ ಹಿರಿಯ ನಾಗರಿಕರಿಗೆ ಪ್ರಯಾಣ ದರದಲ್ಲಿ ಶೇ 25ರಷ್ಟು ರಿಯಾಯಿತಿಯನ್ನು ಒದಗಿಸಲಾಗುತ್ತಿದೆ ಎಂದು ಪ್ರಕಟಿಸಲಾಗಿದೆ. ಹಾಗಿದ್ದರೆ ವಿಮಾನ ನಿಲ್ದಾಣಕ್ಕೆ ಹೋಗಿಬರುವ ವಾಹನಗಳು ಬಿ.ಎಂ.ಟಿ.ಸಿ. ಅಲ್ಲವೆ? ಅದರಲ್ಲೇಕೆ ರಿಯಾಯಿತಿ ನೀಡುತ್ತಿಲ್ಲ? ನಗರ ಸಾರಿಗೆ ಮತ್ತು ಉಸ್ತುವಾರಿ ಸಚಿವರು ಇತ್ತ ಗಮನ ಹರಿಸಿ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಳ್ಳಲಿ.