ಸೋಮವಾರ, 3 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕೊಡುಗೆ’

Last Updated 4 ಸೆಪ್ಟೆಂಬರ್ 2015, 19:41 IST
ಅಕ್ಷರ ಗಾತ್ರ

ಶಿಕ್ಷಕರ ದಿನಾಚರಣೆಗೆ ಶಿಕ್ಷಕರಿಗೆ ಶಿಕ್ಷಣ ಇಲಾಖೆಯ ಕೊಡುಗೆ- ಹೊಟ್ಟೆಗೆ ತಣ್ಣೀರು ಬಟ್ಟೆ! ನಾಡೆಲ್ಲಾ ಸಂಭ್ರಮದಿಂದ ಶಿಕ್ಷಕರ ದಿನಾಚರಣೆ ಆಚರಿಸುತ್ತಿರುವಾಗ ಕೋಲಾರದ ಮಹಿಳಾ ಸಮಾಜದ ಕನ್ನಡ ಮಾಧ್ಯಮ ಶಾಲೆಯ ಅಧ್ಯಾಪಕರಿಗೆ ಕೋಲಾರದ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕಳೆದ ಮೂರು ತಿಂಗಳಿನಿಂದ  ಸಂಬಳವನ್ನೇ ಬಿಡುಗಡೆ ಮಾಡದೆ ಸತಾಯಿಸುತ್ತಿದ್ದಾರೆ. ನಲವತ್ತು ವರ್ಷಗಳ ಹಿಂದಿನಿಂದ ನಡೆಯುತ್ತಿರುವ ಶಾಶ್ವತ ಅನುದಾನದ ಈ ಕನ್ನಡ ಮಾಧ್ಯಮ ಶಾಲೆಗೆ ಈ ವರ್ಷದ ನವೀಕರಣದ ನೆಪವೊಡ್ಡಿ, ಹಲವಾರು ಬಾರಿ ಪತ್ರ ಬರೆದಿದ್ದರೂ ಯಾವ ಉತ್ತರವನ್ನೂ ನೀಡದೆ ಮೂರು ತಿಂಗಳಿನಿಂದ ಅಧ್ಯಾಪಕರಿಗೆ ಸಂಬಳವನ್ನು ಬಿಡುಗಡೆ ಮಾಡದೆ ತೊಂದರೆ ನೀಡುತ್ತಿದ್ದಾರೆ. ಇದೇ ಕ್ಷೇತ್ರ ಶಿಕ್ಷಣಾಧಿಕಾರಿಗಳು ಈ ರೀತಿ ಇದೇ ವರ್ಷದ ಏಪ್ರಿಲ್‌ನಲ್ಲಿಯೂ ಕನ್ನಡ ಮಾಧ್ಯಮ ಶಾಲೆಯ ಅಧ್ಯಾಪಕರಿಗೆ ವಿನಾಕಾರಣ ಮೂರು ತಿಂಗಳು ಸಂಬಳ  ತಡೆಹಿಡಿದಿದ್ದರು. ಆಗ ಇಲಾಖೆಯ ಮೇಲಧಿಕಾರಿಗಳಿಗೆ ದೂರು ನೀಡಿದ ನಂತರ ಸಂಬಳ ಬಿಡುಗಡೆ ಮಾಡಿದ್ದರು. ಪ್ರಾಥಮಿಕ ಶಿಕ್ಷಣ ಸಚಿವರು ಇತ್ತ ಗಮನ ಹರಿಸಿ ಕನ್ನಡ ಮಾಧ್ಯಮದ ಅಧ್ಯಾಪಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಬೇಕು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT