ಪ್ರಥಮ ದರ್ಜೆ ಸಹಾಯಕರ (ಎಫ್.ಡಿ.ಎ) ಹುದ್ದೆಗಳಿಗೆ ನಡೆಯಬೇಕಾಗಿದ್ದ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವುದು, ಸಾಂವಿಧಾನಿಕ ಸಂಸ್ಥೆಯಾದ ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ವೈಫಲ್ಯಗಳ ಸಾಲಿಗೆ ಮತ್ತೊಂದು ಸೇರ್ಪಡೆಯಾಗಿದೆ. ಹಾಗೇ ಅದನ್ನು ಪತ್ತೆ ಹಚ್ಚಿದ ಸಿಸಿಬಿ ಪೊಲೀಸರ ಕಾರ್ಯಕ್ಷಮತೆಯು ಅತ್ಯಂತ ಶ್ಲಾಘನೀಯ. ಹಲವಾರು ಬಾರಿ ಈ ರೀತಿ ಅಕ್ರಮಗಳು ಜರುಗಿ ಸಾವಿರಾರು ಪ್ರತಿಭಾವಂತ ನಿರುದ್ಯೋಗಿಗಳಿಗೆ ಅನ್ಯಾಯವಾಗುತ್ತಿರುವುದು ಇಂದಿನ ಸಮಾಜದ ಮತ್ತು ಆಡಳಿತ ಸಂಸ್ಥೆಗಳ ಅಧಃಪತನವೇ ಸರಿ.