ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್ಗೆ ವಜ್ರಾಭರಣ ಉದ್ಯಮಿ ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿ ₹13,000 ಕೋಟಿ ವಂಚಿಸಲು 2013ರಲ್ಲಿ ಯುಪಿಎ ಆಡಳಿತಾವಧಿಯಲ್ಲಿ ಜಾರಿಗೆ ತಂದ 20:80 ಚಿನ್ನ ಆಮದು ಯೋಜನೆ ಕಾರಣ ಎಂದು ಸಂಸದೀಯ ಸಮಿತಿ ಆರೋಪಿಸಿದೆ.
ಅಂದಿನ ಹಣಕಾಸು ಸಚಿವ ಪಿ.ಚಿದಂಬರಂ, ಸಚಿವಾಲಯದ ಅಧಿಕಾರಿಗಳು ಮತ್ತು ಫಲಾನುಭವಿ ವ್ಯಕ್ತಿ ಹಾಗೂ ಸಂಸ್ಥೆಗಳ ನಡುವಿನ ಸಂಪರ್ಕ ಕುರಿತು ತನಿಖೆ ನಡೆಸುವಂತೆ ಸಮಿತಿ ಶಿಫಾರಸು ಮಾಡಿದೆ.