ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾಧವ್‌ ಪ್ರಕರಣ: ಹೊಸ ಮನವಿ ಸಲ್ಲಿಸಿದ ಭಾರತ

Last Updated 17 ಏಪ್ರಿಲ್ 2018, 20:14 IST
ಅಕ್ಷರ ಗಾತ್ರ

ನವದೆಹಲಿ: ಕುಲಭೂಷಣ ಜಾಧವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತರರಾಷ್ಟ್ರೀಯ ನ್ಯಾಯಾಲಯದಲ್ಲಿ ಭಾರತ ಮಂಗಳವಾರ ಹೊಸದಾಗಿ ಮನವಿ ಸಲ್ಲಿಸಿದೆ.

ಕಳೆದ ವರ್ಷ ಡಿಸೆಂಬರ್‌ 13ರಂದು ಅಂತರರಾಷ್ಟ್ರೀಯ ನ್ಯಾಯಾಲಯದಲ್ಲಿ ಪಾಕಿಸ್ತಾನ ಸಲ್ಲಿಸಿದ್ದ ಮನವಿಗೆ ಪ್ರತಿಕ್ರಿಯೆಯಾಗಿ ಭಾರತ ಈ ಕ್ರಮಕೈಗೊಂಡಿದೆ.

ಇದೇ ವರ್ಷ ಜನವರಿ 17ರಂದು ಪಾಕಿಸ್ತಾನದ ಮನವಿಗೆ ಪ್ರತಿಕ್ರಿಯೆ ನೀಡುವಂತೆ ಐಸಿಜೆ ಭಾರತಕ್ಕೆ ಆದೇಶ ನೀಡಿತ್ತು.

‘ಪಾಕಿಸ್ತಾನದ ಮನವಿಗೆ ಭಾರತ ಮಂಗಳವಾರ ಪ್ರತಿಕ್ರಿಯೆ ಸಲ್ಲಿಸಿದೆ. ಪಾಕಿಸ್ತಾನಕ್ಕೆ ಮತ್ತೆ ಪ್ರತಿಕ್ರಿಯೆ ಸಲ್ಲಿಸಲು ಜುಲೈ 17ರವರೆಗೂ ಕಾಲಾವಕಾಶ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT