ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನಾರೋಗ್ಯದ ನಡುವೆ ಕುಮಾರಸ್ವಾಮಿ ಪ್ರಚಾರ

Last Updated 17 ಏಪ್ರಿಲ್ 2018, 19:30 IST
ಅಕ್ಷರ ಗಾತ್ರ

ಮಡಿಕೇರಿ: ನಿರಂತರ ಪ್ರಚಾರದಲ್ಲಿ ತೊಡಗಿಕೊಂಡಿರುವ ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಏರುಪೇರಾಗಿದೆ.

ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಮವಾರ ಪ್ರಚಾರ ನಡೆಸಿದ್ದ ಅವರು, ರಾತ್ರಿ ವಿರಾಜಪೇಟೆಯ ಅಂಬಟಿ ಗ್ರೀನ್‌ ರೆಸಾರ್ಟ್‌ನಲ್ಲಿ ತಂಗಿದ್ದರು. ಮಂಗಳವಾರ ಬೆಳಿಗ್ಗೆ ಜ್ವರದಿಂದ ಬಳಲುತ್ತಿದ್ದ ಅವರಿಗೆ ವೈದ್ಯರು ಚಿಕಿತ್ಸೆ ನೀಡಿ ವಿಶ್ರಾಂತಿಗೆ ಸೂಚಿಸಿದ್ದರು. ರೆಸಾರ್ಟ್‌ನಲ್ಲೇ ಬೆಳಿಗ್ಗೆ 11 ಗಂಟೆವರೆಗೆ ಅವರು ವಿಶ್ರಾಂತಿ ಪಡೆದರು. ಹೀಗಾಗಿ, 10ಕ್ಕೆ ಆರಂಭವಾಗಬೇಕಿದ್ದ ಜೆಡಿಎಸ್‌ ಸಮಾವೇಶ ಮಧ್ಯಾಹ್ನ 12 ಗಂಟೆಗೆ ಆರಂಭಗೊಂಡಿತು. ಬಳಿಕ ಅವರು ವಿರಾಜಪೇಟೆ, ಕುಶಾಲನಗರದಲ್ಲಿ ಪ್ರಚಾರ ನಡೆಸಿದರು.

‘ಮನೆಯಲ್ಲಿ ಮಲಗಿದ್ದ ಮಾಜಿ ಸಚಿವ ಎಂ.ಸಿ.ನಾಣಯ್ಯ ಅವರನ್ನು ವಿಧಾನ ಪರಿಷತ್‌ ಸದಸ್ಯರನ್ನಾಗಿ ಮಾಡಲಾಯಿತು. ಆದರೂ ಪಕ್ಷ ಸಂಘಟನೆಗೆ ಯಾವ ಕೊಡುಗೆಯನ್ನೂ ನೀಡಲಿಲ್ಲ. ಆತ ದೊಡ್ಡ ವ್ಯಕ್ತಿ. ಪಕ್ಷ ತೊರೆದಿರುವುದರಿಂದ ಜೆಡಿಎಸ್‌ಗೆ ಯಾವ ನಷ್ಟವಿಲ್ಲ’ ಎಂದು ಸುದ್ದಿಗಾರರಿಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT