ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾವಿರಾರು ಭಕ್ತರಿಂದ ಸಾಯಿಬಾಬಾ ಪಾದುಕೆ ದರ್ಶನ

ನ್ಯಾಷನಲ್ ಕಾಲೇಜು ಆವರಣದಲ್ಲಿ ಜನ್ಮಶತಮಾನೋತ್ಸವ
Last Updated 10 ಮಾರ್ಚ್ 2018, 19:36 IST
ಅಕ್ಷರ ಗಾತ್ರ

ಬೆಂಗಳೂರು: ಅಖಿಲ ಭಾರತ ಶಿರಡಿ ಸಾಯಿ ಸಂಘದ ಆಶ್ರಯದಲ್ಲಿ ಶಿರಡಿ ಸಾಯಿಬಾಬಾ ಜನ್ಮಶತಮಾನೋತ್ಸವ ಬಸವನಗುಡಿಯ ನ್ಯಾಷನಲ್ ಕಾಲೇಜು ಆವರಣದಲ್ಲಿ ಶನಿವಾರ ವಿಜೃಂಭಣೆಯಿಂದ ಜರುಗಿತು.

ಸಾವಿರಾರು ಭಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಾಯಿಬಾಬಾ ಹಾಗೂ ಪಾದುಕೆಗಳ ದರ್ಶನ ಪಡೆದರು. ರಾಜ್ಯದ ಬೇರೆ ಭಾಗಗಳಿಂದ ಭಕ್ತರು ಬಂದಿದ್ದರು. ಭಾನುವಾರವೂ ಕಾರ್ಯಕ್ರಮ ನಡೆಯಲಿದ್ದು, ಉಚಿತ ಪ್ರವೇಶ ಕಲ್ಪಿಸಲಾಗಿದೆ.

ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಸಾಯಿಬಾಬಾ ಪವಾಡ ಸಂಬಂಧಿತ ನಾಟಕಗಳನ್ನು ಪ್ರದರ್ಶಿಸಲಾಯಿತು. ಅವು ಭಕ್ತರ ಗಮನ ಸೆಳೆದವು.

ಸಂಘದ ಕಾರ್ಯದರ್ಶಿ ಆರ್.ಅಭಿಷೇಕ್, ‘ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಇಂಥ ಕಾರ್ಯಕ್ರಮ ಆಯೋಜಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಕಾರ್ಯಕ್ರಮಕ್ಕೆ ಬರುತ್ತಿದ್ದಾರೆ. ಬೆಳಿಗ್ಗೆ 7.30 ರಿಂದ ರಾತ್ರಿ 10ರ ವರೆಗೆ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ’ ಎಂದರು.

ಹೆಚ್ಚಿನ ಮಾಹಿತಿಗೆ: 81234 03173.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT