ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಂತ್ರಜ್ಞಾನ– ಸಾಂಸ್ಕೃತಿಕ ಉತ್ಸವ

Last Updated 10 ಮಾರ್ಚ್ 2018, 19:35 IST
ಅಕ್ಷರ ಗಾತ್ರ

ಬೆಂಗಳೂರು: ಯಲಹಂಕದ ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ‘ಅನಾದ್ಯಂತ-2018’ ತಂತ್ರಜ್ಞಾನ ಮತ್ತು ಸಾಂಸ್ಕೃತಿಕ ಉತ್ಸವವನ್ನು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ‘ಯಾವುದೇ ರಂಗದಲ್ಲಿ ಹೊಸದನ್ನು ಸಾಧಿಸಬೇಕಾದರೆ ಹಳೆಯದರ ನೆರವು ಅತ್ಯಗತ್ಯ. ಹಳೆಯದನ್ನು ಮರೆತರೆ ಹೊಸ ಆವಿಷ್ಕಾರ ಯಶಸ್ವಿಯಾಗುವುದಿಲ್ಲ. ವಿಶೇಷವಾದ ಸಾಧನೆಯ ಜೊತೆಗೆ ಸಾಮಾಜಿಕ ವಿಚಾರದಲ್ಲಿಯೂ ಸಾಧನೆ ಮಾಡಬೇಕು. ಇದರಿಂದ ವ್ಯಕ್ತಿತ್ ವವಿಕಸನವಾಗಲು ಸಾಧ್ಯ. ತಂತ್ರಜ್ಞಾನ ದೇಶದ ಆ‌ರ್ಥಿಕ ಪ್ರಗತಿಗೆ ಪೂರಕವಾಗಲಿದೆ’ ಎಂದರು.

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಾಧಿಪತಿ ಪ್ರೊ.ಎನ್.ಆರ್.ಶೆಟ್ಟಿ, ‘ತಂತ್ರಜ್ಞಾನ ಮತ್ತು ವಿಜ್ಞಾನ ಕುರಿತ ಪ್ರಾಚೀನರ ಜ್ಞಾನ ಭಂಡಾರವನ್ನು ಎಲ್ಲರಿಗೂ ಲಭಿಸುವಂತೆ ಡಿಜಿಟಲೀಕರಣ ಮಾಡಲಾಗುವುದು. ವಿದ್ಯಾಸಂಸ್ಥೆಯಲ್ಲಿ ಸಂಶೋಧನೆ ಮತ್ತು ಅನ್ವೇಷಣೆಯ ಜೊತೆಗೆ ಸಾಂಸ್ಕೃ ತಿಕ ಕಾರ್ಯಕ್ರಮಗಳಿಗೂ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ’ ಎಂದು ತಿಳಿಸಿದರು.

ಪ್ರಾಚಾರ್ಯ ಡಾ.ಎಚ್.ಸಿ.ನಾಗರಾಜ್ ಮಾತನಾಡಿ, ‘ಈ ಹಬ್ಬದಲ್ಲಿ ರಾಷ್ಟ್ರಮಟ್ಟದ ಪ್ರಮುಖ 85 ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT