<p><strong>ಸಂಯುಕ್ತ ರಂಗ ಸಂಪುಟ ಸೇರಲು ಸಿಪಿಐ ನಿರ್ಧಾರ</strong></p>.<p>ನವದೆಹಲಿ, ಜೂನ್ 2 (ಪಿಟಿಐ)– ಭಾರತೀಯ ಕಮ್ಯುನಿಸ್ಟ್ ಪಕ್ಷವು ಎಚ್.ಡಿ. ದೇವೇಗೌಡ ನೇತೃತ್ವದ ಸಂಯುಕ್ತ ರಂಗ ಸರ್ಕಾರವನ್ನು ಸೇರಲಿದೆ. ಇದರಿಂದ ದೇಶದ ಇತಿಹಾಸದಲ್ಲಿಯೇ ಪ್ರಥಮ ಬಾರಿಗೆ ಎಡಪಕ್ಷವೊಂದು ಕೇಂದ್ರದ ಅಧಿಕಾರದಲ್ಲಿ ಭಾಗಿಯಾದಂತಾಗಿದೆ.</p>.<p>ಇಂದು ಮುಕ್ತಾಯಗೊಂಡ ಪಕ್ಷದ ರಾಷ್ಟ್ರೀಯ ಮಂಡಳಿಯ ಎರಡು ದಿನಗಳ ಸಭೆಯಲ್ಲಿ ಬಹುಮತದಿಂದ ಈ ನಿರ್ಣಯವನ್ನು ಕೈಗೊಳ್ಳಲಾಯಿತು ಎಂದು ಪಕ್ಷದ ಉಪ ಪ್ರಧಾನ ಕಾರ್ಯದರ್ಶಿ ಎ.ಬಿ. ಬರ್ಧನ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p><strong>ಬುಧವಾರ ರಾಜ್ಯ ಸಂಪುಟ ರಚನೆ</strong></p>.<p>ಬೆಂಗಳೂರು, ಜೂನ್ 2– ರಾಜ್ಯದ ನೂತನ ಸಚಿವ ಸಂಪುಟ ರಚನೆ ಬುಧವಾರ ಆಗಲಿದೆ ಎಂದು ಮುಖ್ಯಮಂತ್ರಿ ಜೆ.ಎಚ್. ಪಟೇಲ್ ಅವರು ಇಂದು ಇಲ್ಲಿ ತಿಳಿಸಿದರು.</p>.<p>‘ಮಾಜಿ ರಾಷ್ಟ್ರಪತಿ ನೀಲಂ ಸಂಜೀವ ರೆಡ್ಡಿ ಅವರ ನಿಧನದಿಂದ ರಾಷ್ಟ್ರದಲ್ಲಿ ಏಳು ದಿನಗಳ ಶೋಕಾಚರಣೆ ಇರುವುದರಿಂದ ನೂತನ ಸಚಿವ ಸಂಪುಟ ರಚನೆಗೆ ಅಡ್ಡಿಗಳೇನಾದರೂ ಇವೆಯೇ ಎಂಬುದನ್ನು ಪರಿಶೀಲಿಸಲಾಗಿದೆ. ಆಡಂಬರ ಇಲ್ಲದೆ ಸರಳವಾಗಿ ಈ ಕಾರ್ಯವನ್ನು ನಡೆಸಬಹುದಾಗಿದೆ’ ಎಂದು ಸ್ಪಷ್ಟಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಂಯುಕ್ತ ರಂಗ ಸಂಪುಟ ಸೇರಲು ಸಿಪಿಐ ನಿರ್ಧಾರ</strong></p>.<p>ನವದೆಹಲಿ, ಜೂನ್ 2 (ಪಿಟಿಐ)– ಭಾರತೀಯ ಕಮ್ಯುನಿಸ್ಟ್ ಪಕ್ಷವು ಎಚ್.ಡಿ. ದೇವೇಗೌಡ ನೇತೃತ್ವದ ಸಂಯುಕ್ತ ರಂಗ ಸರ್ಕಾರವನ್ನು ಸೇರಲಿದೆ. ಇದರಿಂದ ದೇಶದ ಇತಿಹಾಸದಲ್ಲಿಯೇ ಪ್ರಥಮ ಬಾರಿಗೆ ಎಡಪಕ್ಷವೊಂದು ಕೇಂದ್ರದ ಅಧಿಕಾರದಲ್ಲಿ ಭಾಗಿಯಾದಂತಾಗಿದೆ.</p>.<p>ಇಂದು ಮುಕ್ತಾಯಗೊಂಡ ಪಕ್ಷದ ರಾಷ್ಟ್ರೀಯ ಮಂಡಳಿಯ ಎರಡು ದಿನಗಳ ಸಭೆಯಲ್ಲಿ ಬಹುಮತದಿಂದ ಈ ನಿರ್ಣಯವನ್ನು ಕೈಗೊಳ್ಳಲಾಯಿತು ಎಂದು ಪಕ್ಷದ ಉಪ ಪ್ರಧಾನ ಕಾರ್ಯದರ್ಶಿ ಎ.ಬಿ. ಬರ್ಧನ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p><strong>ಬುಧವಾರ ರಾಜ್ಯ ಸಂಪುಟ ರಚನೆ</strong></p>.<p>ಬೆಂಗಳೂರು, ಜೂನ್ 2– ರಾಜ್ಯದ ನೂತನ ಸಚಿವ ಸಂಪುಟ ರಚನೆ ಬುಧವಾರ ಆಗಲಿದೆ ಎಂದು ಮುಖ್ಯಮಂತ್ರಿ ಜೆ.ಎಚ್. ಪಟೇಲ್ ಅವರು ಇಂದು ಇಲ್ಲಿ ತಿಳಿಸಿದರು.</p>.<p>‘ಮಾಜಿ ರಾಷ್ಟ್ರಪತಿ ನೀಲಂ ಸಂಜೀವ ರೆಡ್ಡಿ ಅವರ ನಿಧನದಿಂದ ರಾಷ್ಟ್ರದಲ್ಲಿ ಏಳು ದಿನಗಳ ಶೋಕಾಚರಣೆ ಇರುವುದರಿಂದ ನೂತನ ಸಚಿವ ಸಂಪುಟ ರಚನೆಗೆ ಅಡ್ಡಿಗಳೇನಾದರೂ ಇವೆಯೇ ಎಂಬುದನ್ನು ಪರಿಶೀಲಿಸಲಾಗಿದೆ. ಆಡಂಬರ ಇಲ್ಲದೆ ಸರಳವಾಗಿ ಈ ಕಾರ್ಯವನ್ನು ನಡೆಸಬಹುದಾಗಿದೆ’ ಎಂದು ಸ್ಪಷ್ಟಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>