ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತ್ಯಾಚಾರ ಖಂಡಿಸಿ ಮೊಂಬತ್ತಿ ಮೆರವಣಿಗೆ

Last Updated 16 ಏಪ್ರಿಲ್ 2018, 10:51 IST
ಅಕ್ಷರ ಗಾತ್ರ

ಸಿಂಧನೂರು: ಉನ್ನಾವ್ ಮತ್ತು ಕಠುವಾದಲ್ಲಿ ನಡೆದಿರುವ ಅತ್ಯಾಚಾರ ಪ್ರಕರಣಗಳನ್ನು ಖಂಡಿಸಿ  ಯುವಕರು ಶನಿವಾರ ಇಲ್ಲಿನ ಮಹಾತ್ಮಗಾಂಧಿ ವೃತ್ತದಲ್ಲಿ ಮೊಂಬತ್ತಿ ಹಿಡಿದು ಪ್ರತಿಭಟನೆ ನಡೆಸಿದರು.

ಕುರಿ ಮೇಯಿಸಲು ಹೋಗಿದ್ದ ಎಂಟು ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದು ಅತ್ಯಂತ ಹೇಯ ಕೃತ್ಯ.ಆರೋಪಿಗಳಿಗೆ ಕಠಿಣ ಶಿಕ್ಷೆ
ವಿಧಿಸಬೇಕು ಎಂದು ಯುವಕರು ಆಗ್ರಹಿಸಿದರು.ಇಂತಹ ಘಟನೆಗಳು ಮರುಕಳಿಸದಂತೆ ಕೇಂದ್ರ ಸರ್ಕಾರ ಕಾನೂನು ರೂಪಿಸಬೇಕು ಎಂದು ಒತ್ತಾಯಿಸಿದರು.

ಯುವ ಮುಖಂಡರಾದ ನಿಸಾರ್‌ಖಾನ್‌, ಮುರ್ತುಜಾ ಹುಸೇನ್, ಶಫಿ ಉಲ್ಲಾಖಾನ್, ಮುನ್ನಾ, ಅಬ್ದುಲ್ ಕರೀಂ, ನದೀಮುಲ್ಲಾ, ದಾವೂದ್, ಸಲೀಂ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT