ಚಿತ್ರಾವಳಿ | ರಾಜ್ಯದ ವಿವಿಧೆಡೆ ಭಕ್ತರ ದರ್ಶನಕ್ಕೆ ಬಾಗಿಲು ತೆರೆದ ದೇಗುಲಗಳು
ಲಾಕ್ಡೌನ್ ಹಿನ್ನೆಲೆಯಲ್ಲಿ ಭಕ್ತರ ದರ್ಶನಕ್ಕೆ ವಿಧಿಸಿದ್ದ ನಿರ್ಬಂಧವನ್ನು ರಾಜ್ಯದ ಅನೇಕ ದೇಗುಲಗಳಲ್ಲಿ ಸೋಮವಾರ ತೆರವುಗೊಳಿಸಲಾಗಿದೆ. ಧರ್ಮಸ್ಥಳ ಮಂಜುನಾಥ ಸ್ವಾಮಿ, ಕುಕ್ಕೆ ಸುಬ್ರಹ್ಮಣ್ಯ, ಮೈಸೂರಿನ ಚಾಮುಂಡಿ ದೇಗುಲ, ಮೇಲುಕೋಟೆಯ ಚೆಲುವನಾರಾಯಣ ಸ್ವಾಮಿ ದೇಗುಲ, ಬಾದಾಮಿಯ ಬನಶಂಕರಿ ಸೇರಿದಂತೆ ಅನೇಕ ದೇವಾಲಯಗಳಲ್ಲಿ ನೂರಾರು ಭಕ್ತರು ದೇವರ ದರ್ಶನ ಪಡೆದರು. – ಪ್ರಜಾವಾಣಿ ಚಿತ್ರಗಳು