PHOTOS | ಹಾವೇರಿ: ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ, ನುಡಿಜಾತ್ರೆಗೆ ಕಲಾತಂಡಗಳ ಮೆರುಗು
ಯಾಲಕ್ಕಿ ಕಂಪಿನ ನಗರಿ, ಸರ್ವ ಧರ್ಮಗಳ ಸಾಮರಸ್ಯದ ಬೀಡು ಹಾವೇರಿಯಲ್ಲಿ ಜ.6 ರಿಂದ ಜ.8 ರವರೆಗೆ ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ರಾಷ್ಟ್ರ, ನಾಡ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಧ್ವಜಾರೋಹಣ ಮಾಡುವುದರ ಮೂಲಕ ಚಾಲನೆ ನೀಡಲಾಯಿತು.‘ಸಂತ ಶರಣರ ನಾಡು– ಭಾವೈಕ್ಯದ ಬೀಡು’ ಎಂದೇ ಹೆಸರಾದ ಹಾವೇರಿಯು ಪ್ರತ್ಯೇಕ ಜಿಲ್ಲೆಯಾಗಿ ರೂಪುಗೊಂಡ 25 ವರ್ಷಗಳ ನಂತರ ಮೊದಲ ಬಾರಿಗೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಆತಿಥ್ಯವನ್ನು ವಹಿಸಿಕೊಂಡಿದೆ. ‘ಸಾಮರಸ್ಯದ ಭಾವ– ಕನ್ನಡದ ಜೀವ’ ಈ ಬಾರಿಯ ಘೋಷವಾಕ್ಯವಾಗಿದೆ.ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ದೊಡ್ಡರಂಗೇಗೌಡ ಅವರು ಸಮ್ಮೇಳನಾಧ್ಯಕ್ಷರ ಭಾಷಣ ಮಾಡಲಿದ್ದಾರೆ.